ಕೊಡಗಿನಲ್ಲಿ ಮತ್ತೆ ಮಳೆಯ ಆತಂಕ

September 3, 2019
10:16 PM

ಮಡಿಕೇರಿ : ಕೊಡಗು ಜಿಲ್ಲೆಗೆ ಮತ್ತೆ ಮಳೆಯ ಆತಂಕ ಎದುರಾಗಿದೆ. ಮಳೆ ಹೋಯಿತು ಎಂದು ಸುಧಾರಿಸಿಕೊಳ್ಳುವ ಹೊತ್ತಿನಲ್ಲೇ ಸೆಪ್ಟಂಬರ್ ತಿಂಗಳ ಆರಂಭದಲ್ಲೇ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅತಿಹೆಚ್ಚು ಮಳೆಯಾಗುವ ಭಾಗಮಂಡಲ ಹಾಗೂ ತಲಕಾವೇರಿಯಲ್ಲಿ ಸಾಧಾರಣ ಪ್ರಮಾಣದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಗುಡ್ಡ ಕುಸಿತದಿಂದ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ವಿರಾಜಪೇಟೆ ತಾಲೂಕಿನಲ್ಲಿ ಮಳೆಯ ಪ್ರಮಾಣ ಹೆಚ್ಚೇ ಇದೆ. ಪಟ್ಟಣ ಪಂಚಾಯತ್ ವ್ಯಾಪ್ತಿಯ ಏಳನೇ ವಾರ್ಡ್‍ನ ತಡೆಗೋಡೆಯೊಂದು ಕುಸಿದು ಬಿದ್ದು, ಅಪಾಯದ ಪರಿಸ್ಥಿತಿ ಎದುರಾಗಿದೆ. ಸುಮಾರು ಹತ್ತಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಸೋಮವಾರಪೇಟೆ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕಿನಲ್ಲಿ ಸಾಧಾರಣ ರೀತಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಂಜಿನ ನಗರಿ ಮಡಿಕೇರಿಯಲ್ಲಿ ಮಂಜು, ಮಳೆಯೊಂದಿಗೆ ಮೈಕೊರೆಯುವ ಚಳಿಯೂ ಇದೆ.
ಜಿಲ್ಲೆಯ ನದಿ ಹಾಗೂ ಗುಡ್ಡ ಪ್ರದೇಶ ವ್ಯಾಪ್ತಿಯ ಜನರು ಮತ್ತೆ ಮಳೆಯಾಗುತ್ತಿರುವುದರಿಂದ ಆತಂಕಗೊಂಡಿದ್ದಾರೆ. ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಬದುಕನ್ನೇ ಕಳೆದುಕೊಂಡ ಅನೇಕ ಕುಟುಂಬಗಳು ಇನ್ನೂ ಕೂಡ ಸಂಕಷ್ಟದಲ್ಲೇ ದಿನ ಕಳೆಯುತ್ತಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror