ಕೊಡಗಿನಲ್ಲಿ ಮಳೆ ಬಂದರೂ ಕೃಷಿಗೆ ಸಾಲುತ್ತಿಲ್ಲ : ರೈತಾಪಿ ವರ್ಗದಲ್ಲಿ ಆತಂಕ

July 29, 2019
11:00 AM

ಮಡಿಕೇರಿ : ಭಾರತೀಯ ಹವಾಮಾನ ಇಲಾಖೆ ಕಳೆದ ಒಂದು ತಿಂಗಳಿನಿಂದ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡುತ್ತಲೇ ಬಂದಿದೆಯಾದರು ಕೊಡಗು ಜಿಲ್ಲೆಗೆ ಮಾತ್ರ ನಿರೀಕ್ಷಿತ ಮಳೆಯಾಗುತ್ತಿಲ್ಲ.

Advertisement
Advertisement
Advertisement
Advertisement

ಜಿಲ್ಲೆಯಲ್ಲಿ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ರೈತಾಪಿ ವರ್ಗ ಆತಂಕಗೊಂಡಿದೆ. ಮಳೆ ಬಂದರೂ ಒಮ್ಮೆಲೇ ಬಂದು ಅಪಾಯ ಸೃಷ್ಟಿಸಿ ಮರೆಯಾಗುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಪ್ರತೀವರ್ಷದಂತೆ ಮಳೆ ಸುರಿಯದ ಕಾರಣ ಈಗ ಕೃಷಿ ಉಳಿಸುವುದೇ ಚಿಂತೆಯಾಗಿದೆ.

Advertisement

ಕಳೆದ ವರ್ಷ ಮಹಾಮಳೆಯಿಂದ ನಲುಗಿದ್ದ ಕೊಡಗಿನಲ್ಲಿ ಜನವರಿ ತಿಂಗಳಿನಿಂದ ಜುಲೈ ಅಂತ್ಯದವರೆಗೆ ದಾಖಲೆಯ 3566.21 ಮಿ.ಮೀ. ಮಳೆಯಾಗಿತ್ತು. ಆದರೆ ಈ ಬಾರಿ ಜನವರಿಯಿಂದ ಇಲ್ಲಿಯವರೆಗೆ ಕೇವಲ 1255.80 ಮಿ.ಮೀ ಮಳೆಯಾಗಿದ್ದು, 80 ರಿಂದ 90 ಇಂಚು ಮಳೆ ಕೊರತೆಯಾಗಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದ ರೈತರು ನಿರಾಶೆಗೊಂಡಿದ್ದು, ಇರುವಷ್ಟು ನೀರನ್ನು ಬಳಸಿಕೊಂಡು ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ವನ್ಯಜೀವಿಗಳ ದಾಳಿ ಮತ್ತು ಹವಾಗುಣದ ವೈಪರೀತ್ಯದಿಂದ ಬೇಸತ್ತು ಕೊಡಗಿನ ರೈತರು ಕೃಷಿ ಕ್ಷೇತ್ರದಿಂದ ದೂರ ಸರಿಯಲು ಆರಂಭಿಸಿದ್ದಾರೆ. ಇರುವ ಬೆರಳೆಣಿಕೆಯಷ್ಟು ಮಂದಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಸಕಾಲದಲ್ಲಿ ಮಳೆಯಾಗದೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ನಾಟಿ ಮಾಡುವುದರಿಂದ ತೊಡಗಿ ಕಟಾವುವರೆಗೆ ನಿಗದಿತ ಪ್ರಮಾಣದಲ್ಲಿ ನಿಗದಿತ ಅವಧಿಯಲ್ಲೇ ಮಳೆಯಾದರೆ ಮಾತ್ರವೇ ಕೃಷಿ ಕಾರ್ಯ ಚೆನ್ನಾಗಿ ನಡೆಯುತ್ತದೆ. ಈ ಬಾರಿ ಒಮ್ಮೆಲೇ ಸುರಿವ ಭಾರೀ ಮಳೆ ಹಾಗೂ ಆ ನಂತರ ಬಿಸಿಲು ಕಂಡುಬರುತ್ತಿರುವುದು  ಕೃಷಿ ನಿರೀಕ್ಷೆಗಳೆಲ್ಲಾ ತಲೆಗೆಳಗೆ ಮಾಡುತ್ತಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |
February 25, 2025
8:40 PM
by: The Rural Mirror ಸುದ್ದಿಜಾಲ
ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror