#ಕೊರೊನಾ ಔಟ್ಬ್ರೇಕ್ | ಕೊರೊನಾ ವೈರಸ್ ಸೋಂಕಾದವರಿಗೆ ಭಯ ಬೇಡ | ನಡೆಯುತ್ತಿದೆ ಆನ್ ಲೈನ್ ಕೌನ್ಸಿಲಿಂಗ್ | ಸಕ್ರಿಯವಾಗಿ ತೊಡಗಿಸಿಕೊಂಡ ಸುಳ್ಯದ ಅಕ್ಷರ ದಾಮ್ಲೆ |

March 30, 2020
1:43 PM

ಸುಳ್ಯ: ಕೊರೊನಾ ವೈರಸ್ ಸೋಂಕಾದ ವ್ಯಕ್ತಿಗಳು ಹಾಗೂ ಕ್ವಾಂರೇಂಟೈನ್ ನಲ್ಲಿರುವ ಮಂದಿ ಹಾಗೂ ಅವರ ಕುಟುಂಬದ ಮಂದಿ ಸಹಜವಾಗಿಯೇ ಮಾನಸಿಕವಾಗಿ ನೊಂದಿರುತ್ತಾರೆ. ಇಂತಹವರಿಗೆ ಆನ್ ಲೈನ್ ಮೂಲಕ ನೆರವಾಗಲು, ಆಪ್ತಸಮಾಲೋಚನೆ ಮಾಡಲು ತಂಡ ಸಿದ್ಧವಾಗಿದೆ. ಬೆಂಗಳೂರಿನಲ್ಲಿ  ಸೋಚರ ಸಂಸ್ಥೆಯ ಮೂಲಕ ರಚನೆಯಾಗಿರುವ ಕೌನ್ಸಿಲಿಂಗ್   ತಂಡವನ್ನು ಸುಳ್ಯದ ಅಕ್ಷರ ದಾಮ್ಲೆ ನಿರ್ವಹಿಸುತ್ತಿದ್ದು, ಸೋಚರ ಸಂಸ್ಥೆ ವ್ಯವಸ್ಥೆ ಮಾಡುತ್ತಿದೆ. ಎಲ್ಲಾ ವೈದ್ಯರು, ಆಪ್ತ ಸಮಾಲೋಚಕರು ಉಚಿತವಾಗಿ ಈಗ ಬಿಡುವು ಮಾಡಿಕೊಂಡು ಸಾರ್ವಜನಿಕ ಸೇವೆ ನಡೆಸುತ್ತಿದ್ದಾರೆ.

ಸೋಚರ ಎಂಬ ಸಂಸ್ಥೆ ಸುಮಾರು 30 ವರ್ಷಗಳಿಂದ ಸಾಮಾಜಿಕ ಸ್ವಾಸ್ಥ್ಯ ಹಾಗೂ ಸಾರ್ವಜನಿಕ ಆರೋಗ್ಯದ ಬಗ್ಗೆ ಕೆಲಸ ಮಾಡುತ್ತಿದೆ. ಇದೀಗ ಈ ಸಂಸ್ತೆ ಸಾರ್ವಜನಿಕ ಕಾಳಜಿಯಿಂದ ಕೊರೊನಾ ಭಯ ನಿವಾರಣೆ ಮಾಡಲು ಹಾಗೂ ಈ ವೈರಸ್ ಸೋಂಕಾಗಿರುವ ವ್ಯಕ್ತಿಗಳ, ಕುಟುಂಬದೊಂದಿಗೆ ಆಪ್ತ ಸಮನಾಲೋಚನೆ ನಡೆಸಿ ಧೈರ್ಯ ತುಂಬುವ ಕಾರ್ಯವನ್ನು ಅನ್ ಲೈನ್ ಮೂಲಕ ಮಾಡುತ್ತಿದೆ. ಇದಕ್ಕೆ ಸುಳ್ಯದ ಅಕ್ಷರ ದಾಮ್ಲೆ ಅವರನ್ನು  ಸಂಪರ್ಕಿಸಿ ಅವರ ನೇತೃತ್ವದಲ್ಲಿ  ಇದೀಗ ಸಮಾಲೋಚನಾ ಚಟುವಟಿಕೆ ಆರಂಭಿಸಲಾಗಿದೆ.

ಇದೀಗ 3 ವಿಭಾಗದಲ್ಲಿ  ಕೆಲಸ ಮಾಡಲಾಗುತ್ತದೆ, ಕೋವಿಡ್-19 ಸೋಂಕಿಗೆ ಒಳಗಾದವರು , ಕೋವಿಡ್-19 ಕ್ವಾರಂಟೇನ್ ನಲ್ಲಿ ಇರುವವರು ಹಾಗೂ ಕುಟುಂಬದ ಸದಸ್ಯರಿಗೆ ಹಾಗೂ ಪ್ರತ್ಯೇಕವಾಗಿ ಹೀಗೆ 3 ವಿಭಾಗದಲ್ಲಿ ಆಪ್ತಸಮಾಲೋಚನೆ ನಡೆಸಲಾಗುತ್ತಿದೆ.

ಯಾವುದೇ ರೀತಿಯ ಸಹಾಯ ಬೇಕಿದ್ದರೆ, ಮಾಹಿತಿ ಬೇಕಿದ್ದರೆ ಈ ಕೆಳಗಿನ ಸಂಪರ್ಕದ ಸಂಖ್ಯೆಗೆ ಕರೆ ಮಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror