ಕೊರೊನಾ ಲಾಕ್ಡೌನ್ | ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು ಕಷ್ಟವಿದೆ | ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ |

March 29, 2020
2:54 PM

ನವದೆಹಲಿ: ಕೊರೊನಾ ವೈರಸ್ ಹರಡುವುದು  ತಡೆಯಲಿ ಈಗ  ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement

ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಿನ ಪರಿಸ್ಥಿತಿಯಲ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಟ ಮಾಡುವುದೆಂದರೆ  ಸಾವು, ಬದುಕಿನ ನಡುವೆ ನಡೆಸುತ್ತಿರುವ ಹೋರಾಟ, ಹೀಗಾಗಿ ಸಂಪೂರ್ಣ ಬಂದ್ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಯಾರು ಕೂಡ ಕಾನೂನನ್ನು ಬೇಕೆಂದೇ ದುರುದ್ದೇಶಪೂರ್ವಕವಾಗಿ ಮುರಿಯಲು ನೋಡುವುದಿಲ್ಲ, ಆದರೂ ಕೆಲವರು ನಿಯಮ ಮುರಿಯಲು ನೋಡುತ್ತಿದ್ದಾರೆ. ದಯವಿಟ್ಟು ಈ ಕೆಲಸ ಮಾಡಬೇಡಿ ಎಂದ ಪ್ರಧಾನಿ  ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಬಡವರಿಗೆ ನನ್ನ ಮೇಲೆ ಕೋಪ ಬಂದಿದೆ. ಏಕೆ ಈ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಕೊರೊನಾ ವೈರಸ್​ ವಿರುದ್ಧ ಹೋರಾಡಲು  ಬೇರೆ ದಾರಿಯೇ ಇರಲಿಲ್ಲ. ಆದರೆ, ಬೇರೆ ದೇಶಗಳ ಸ್ಥಿತಿ ನೋಡಿದಾಗ ಈ ರೀತಿಯ ಕ್ರಮ ಸರಿ ಎನ್ನಿಸುತ್ತದೆ. ಭಾರತೀಯರ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.

ಸಾಕಷ್ಟು ಜನರು ಕೊರೋನಾ ವೈರಸ್​ ವಿರುದ್ಧ ಹೋರಾಡುತ್ತಿದ್ದಾರೆ. ವೈದ್ಯರು, ನರ್ಸ್​ಗಳು ಮತ್ತು ಔಷಧಾಲಯದವರು ಕೊರೊನಾ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಇವರು ಮೊದಲ ಸಾಲಿನ ಸೈನಿಕರು ಎಂದು ಅಭಿನಂದಿಸಿದರು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror