ಕೊರೊನಾ ವೈರಸ್ ಹರಡುವ ಭೀತಿ | ಕರ್ನಾಟಕ-ಕೇರಳ ಗಡಿಭಾಗದಲ್ಲಿ ರಸ್ತೆಗೆ ಮಣ್ಣು ಸುರಿದು ಬಂದ್ | ಎಲ್ಲೆಡೆ ಕಟ್ಟೆಚ್ಚರ

March 25, 2020
8:42 PM

ಸುಳ್ಯ: ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸರಕಾರ ವಿವಿಧ ಕ್ರಮ ಕೈಗೊಂಡಿದೆ. ಇದೀಗ ಸಾರ್ವಜನಿಕರೇ ಕರ್ನಾಟಕ-ಕೇರಳ ಗಡಿಭಾಗದ ರಸ್ತೆಗಳಲ್ಲಿ  ಮಣ್ಣು ಸುರಿದ ರಸ್ತೆ ತಡೆ ಮಾಡಿದ್ದಾರೆ.

ಸುಳ್ಯ ಸಂಪರ್ಕ ಮಾಡುವ ಕೋಲ್ಚಾರು, ಕಲ್ಲಪ್ಪಳ್ಳಿ, ಗಾಳಿಮುಖ ಮೊದಲಾದ ಕಡೆಗಳಲ್ಲಿ  ರಸ್ತೆ ತಡೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವಾಹನಗಳ ಓಡಾಟ ನಡೆಸದಂತೆ ಎಚ್ಚರಿಕೆ ವಹಿಸಲಾಗಿದೆ. ಮಣ್ಣು ಸುರಿದ ರಸ್ತೆ ತಡೆ ಮಾಡಿರುವುದಕ್ಕೆ ವಿರೋಧವೂ ವ್ಯಕ್ತವಾಗಿದೆ.

ಸಂಪಾಜೆ ಗಡಿಭಾಗ ಹಾಗೂ ಇತರ ಜಿಲ್ಲಾ ಗಡಿಭಾಗದಲ್ಲಿ ಇಲಾಖೆಗಳ ವತಿಯಿಂದಲೇ ತಪಾಸಣೆ ನಡೆಸಿ ಅಗತ್ಯ ಕಂಡರೆ ಮಾತ್ರವೇ ಬಿಡಲಾಗುತ್ತಿದೆ. ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ, ಆರಕ್ಷಕ ಠಾಣಾ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ತಪಾಸಣೆ ನಡೆಯುತ್ತಿದೆ.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ
March 12, 2025
10:13 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |
March 12, 2025
10:03 PM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್
March 12, 2025
7:19 AM
by: The Rural Mirror ಸುದ್ದಿಜಾಲ
 ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ
March 12, 2025
7:13 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror