ಕೊಳವೆ ಬಾವಿಯಲ್ಲಿ ಕಲುಷಿತ ಜಲ ಪತ್ತೆ : ನೀರನ್ನು ಬಳಸದಂತೆ ಕೂಡಿಗೆ ಶಾಲೆಗೆ ಸೂಚನೆ

September 6, 2019
2:00 PM

ಮಡಿಕೇರಿ : ಕೂಡಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೂರು ವರ್ಷಗಳ ಹಿಂದೆ ಕೊರೆಸಲಾಗಿರುವ ಕೊಳವೆ ಬಾವಿಯಲ್ಲಿನ ನೀರು ಕಲುಷಿತಗೊಂಡಿದ್ದು, ಈ ನೀರನ್ನು ಕುಡಿಯಲು ಉಪಯೋಗಿಸಬಾರದೆಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಾಲೆಯ ಮುಖ್ಯಸ್ಥರಿಗೆ ಹಾಗೂ ಗ್ರಾ.ಪಂ ಗೆ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯವರು ಪ್ರತಿವರ್ಷದಂತೆ ಆ ವ್ಯಾಪ್ತಿಯ ಕೊಳವೆ ಬಾವಿಗಳ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ, ಕುಡಿಯಲು ಯೋಗ್ಯವೇ ಅಥವಾ ಯೋಗ್ಯವಾಗಲ್ಲವೆ ಎಂಬುದನ್ನು ತಿಳಿಸುತ್ತಾರೆ. ಅದರಂತೆ ಕಳೆದ ತಿಂಗಳಲ್ಲಿ ಕೂಡಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕೊಳವೆ ಬಾವಿಯ ನೀರನ್ನು ಪರೀಕ್ಷಿಸಲಾಗಿ, ನೀರು ಕುಡಿಯಲು ಯೋಗ್ಯವಾಗಿಲ್ಲ ಕಲುಷಿತಗೊಂಡಿದ್ದು, ಶಾಲೆಯಲ್ಲಿ ಕುಡಿಯಲು ಹಾಗೂ ಆಹಾರ ತಯಾರಿಸಲು ಬಳಸಬಾರದೆಂದು ಸೂಚಿಸಿದ್ದರು.

ಆದರೂ, ಈ ಕೊಳವೆ ಬಾವಿಯ ನೀರನ್ನು ಬಳಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆರೋಗ್ಯ ಇಲಾಖೆಯವರು ಮತ್ತೊಮ್ಮೆ ಪ್ರಯೋಗಾಲಯದಲ್ಲಿ ನೀರನ್ನು ಪರೀಕ್ಷಿಸಿ ಕಲುಷಿತಗೊಂಡು ಕುಡಿಯಲು ಯೋಗ್ಯವಲ್ಲದ ನೀರಾಗಿರುವುದನ್ನು ಮತ್ತೊಮ್ಮೆ ದೃಢೀಕರಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಿಗೆ ವಿಷಯ ತಿಳಿಸಿ, ವಿದ್ಯಾರ್ಥಿಗಳಿಗೆ ಕುಡಿಯಲು ಹಾಗೂ ಆಹಾಯ ತಯಾರಿಸಲು ಈ ನೀರನ್ನು ಬಳಸದಂತೆ ಸೂಚಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಕಲುಷಿತ ನೀರು ದೊರೆಯುತ್ತಿರುವ ಬಗ್ಗೆ ಗ್ರಾ.ಪಂ ಈಗಾಗಲೇ ಜಿ.ಪಂ ಗಮನ ಸೆಳೆದಿದೆ ಎಂದು ಗ್ರಾ.ಪಂ ಅಧಿಕಾರಿಗಳು ತಿಳಿಸಿದರು. ಸ್ಥಳೀಯ ಎರಡು ಬಡಾವಣೆಗಳಿಗೂ ಇದೇ ಕೊಳವೆ ಬಾವಿಯ ನೀರು ಸರಬರಾಜಾಗುತ್ತಿದ್ದು, ಇಲ್ಲಿನ ನಿವಾಸಿಗಳಿಗೂ ನೀರನ್ನು ಬಳಸದಂತೆ ತಿಳಿಸಲಾಗಿದೆ ಎಂದರು. ಶುದ್ಧ ಕುಡಿಯುವ ನೀರು ದೊರೆಯುವಲ್ಲಿಯವರೆಗೆ ಈ ಕೊಳವೆ ಬಾವಿಯ ನೀರನ್ನು ಶಾಲೆಯ ಚಟುವಟಿಕೆಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಬಳಕೆ ಮಾಡಲು ಅವಕಾಶ ನೀಡುವುದಿಲ್ಲವೆಂದು ಶಾಲಾ ಮುಖ್ಯ ಶಿಕ್ಷಕರು ಸ್ಪಷ್ಟ ಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror