ಕೋಟೆ ದೇವಾಲಯದಲ್ಲಿ ನವರಾತ್ರಿ ಉತ್ಸವ

October 7, 2019
12:34 PM

ಕಳಂಜ : ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶ್ರೀ ದುರ್ಗಾ ಮಾತೆಯ ಸನ್ನಿಧಿಯಲ್ಲಿ ನವರಾತ್ರಿ ಉತ್ಸವ ಜರುಗುತ್ತಿದೆ. ಇದರ ಅಂಗವಾಗಿ ಪ್ರತಿನಿತ್ಯ ಸಂಜೆ 7 ರಿಂದ 8 ರ ತನಕ ವಿವಿಧ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ, ಶ್ರೀ ದೇವರ ಸನ್ನಿಧಿಯಲ್ಲಿ ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗುತ್ತಿವೆ.

ಶ್ರೀ ಸತ್ಯಸಾಯಿ ಸೇವಾ ಸಮಿತಿ ಚೊಕ್ಕಾಡಿ, ಶ್ರೀ ರಾಮ ಭಜನಾ ಮಂಡಳಿ ಕಲ್ಲಡ್ಕ, ದೇವರಕಾನ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ಮುರುಳ್ಯ, ಶ್ರೀ ರಾಮ ಭಜನಾ ಮಂಡಳಿ ಕಿಲಂಗೋಡಿ, ಶ್ರೀ ವಿಷ್ಣುಮೂರ್ತಿ ಸೇವಾ ಸಂಘ ಕಳಂಜ, ಶ್ರೀ ದೇವಿ ಭಜನಾ ಮಂಡಳಿ ಚೊಕ್ಕಾಡಿ, ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ, ಶ್ರೀ ವಿದ್ಯಾಅನಿಕೇತನ ಶಿಶುಮಂದಿರ ಕಳಂಜ ದ ಮುಂತಾದ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.

ಇಂದು ನವರಾತ್ರಿ ಉತ್ಸವ ಸಮಾಪ್ತಿಗೊಳ್ಳಲಿದ್ದು, ಶ್ರೀ ಮಂಜುನಾಥ ಭಜನಾ ಮಂಡಳಿ ಕೋಟೆ ಮುಂಡುಗಾರು ಇವರ ವತಿಯಿಂದ ನೃತ್ಯ ಭಜನೆ, ವೇ.ಮೂ.ಶ್ರೀ ಕಾಯಾರ ಶಾಂತಕುಮಾರ ಭಟ್ಟರ ಹಿರಿತನದಲ್ಲಿ ಸಾಮೂಹಿಕ ಶ್ರೀ ಚಂಡಿಕಾ ಹವನ, ರಂಗಪೂಜೆ ಮುಂತಾದ ಕಾರ್ಯಕ್ರಮಗಳು ಜರುಗಲಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror