ಬೆಳ್ಳಾರೆ : ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.
ಬ್ರಹ್ಮಶ್ರೀ ವೇ|ಮೂ ನೀಲೇಶ್ವರ ದಾಮೋದರ ತಂತ್ರಿಗಳ ಮಾರ್ಗದರ್ಶನದೊಂದಿಗೆ ಬ್ರಹ್ಮಶ್ರೀ ವಿಷ್ಣು ಭಟ್ ಪಟ್ಟೇರಿ ನೇತೃತ್ವದಲ್ಲಿ ಗಣಪತಿ ಹೋಮ, ದೃಢಕಲಶ ಪೂಜೆ, ಕಲಶಾಭಿಷೇಕ ಹಾಗೂ ಮಹಾಪೂಜೆ ನಡೆಯಿತು. ದೇವಳದ ಭಕ್ತರಿಂದ ಏಕಾದಶ ರುದ್ರಾಭಿಷೇಕ ಹಾಗೂ ಕಲಶಪೂಜೆ ನೆರವೇರಿತು.
ಆಡಳಿತ ಧರ್ಮದರ್ಶಿ ಸೀತಾರಾಮ ಕೋಟೆ, ಧರ್ಮದರ್ಶಿಗಳಾದ ವಾರಣಾಶಿ ಗೋಪಾಲಕೃಷ್ಣ ಭಟ್, ಕೆದ್ಲ ನರಸಿಂಹ ಭಟ್ ಹಾಗೂ ಆಡಳಿತ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಅರ್ಚಕ ಮಂಜುನಾಥ ಭಟ್ ಹಾಗೂ ಪವನ ವೆಂಕಟ್ರಮಣ ಭಟ್ ಸಹಕರಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಕೋಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ"