ಗಾಯಗೊಂಡ ಆನೆಗೆ ಚಿಕಿತ್ಸೆ ನಡೆಯಲಿಲ್ಲ…!

May 9, 2019
8:45 PM

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ  ಬುಧವಾರ ಕಂಡುಬಂದ ಕಾಡಾನೆಗೆ ಗುರುವಾರ ಸಂಜೆಯವರೆಗೆ ಚಿಕಿತ್ಸೆ ನಡೆಯಲಿಲ್ಲ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದಾರೆ.

Advertisement
Advertisement
Advertisement
Advertisement

Advertisement

ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ಬಳಿಕ ಅರಣ್ಯ  ಸುಬ್ರಹ್ಮಣ್ಯ ಅರಣ್ಯ ಇಲಾಖೆ ಸಿಬಂದಿಗಳಿಗೆ ಮಾಹಿತಿಯನ್ನು ಸ್ಥಳೀಯರು  ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯ ಸಿಬಂದಿಗಳು ಬುಧವಾರ ಬೆಳಗ್ಗೆ ಆನೆಯಿರುವ ಕಾಡಿನತ್ತ ತೆರಳಿ ಪರಿಶೀಲಿಸಿದರು.ಗುರುವಾರ ಮತ್ತೆ ಆಗಮಿಸಿ ಕಾಡಾನೆಗೆ ನೋವಾಗಿರುವ ಭಾಗವನ್ನು ಬೈನಾಕುಲರ್ ಮೂಲಕ ಗಮನಿಸಿದರು. ಈ ಸಂದರ್ಭ ಗಾಯವಾದ ಹಾಗೂ ಕೀವು ತುಂಬಿರುವುದು ಕಂಡುಬಂದಿದೆ. ಪಶುವೈದ್ಯರು ಸ್ಥಳಕ್ಕೆ ಆಗಮಿಸಿದರೂ ಯಾವುದೇ ಚಿಕಿತ್ಸೆ ನೀಡಲು ಸಾಧ್ಯವಾಗಿರಲಿಲ್ಲ. ಗುರುವಾರ ಆನೆಯು ಘೀಳಿಡುತ್ತಿತ್ತು ಹಾಗೂ ಅತ್ತಿತ್ತ ಚಲನೆಯಲ್ಲಿದ್ದ ಕಾರಣ ಆನೆಯ ಸಮೀಪಕ್ಕೆ ಹೋಗಲು ಸಾಧ್ಯವಾಗಲಿಲ್ಲ.

Advertisement

ಮಧ್ಯಾಹ್ನದ ಬಳಿಕ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದರು. ಸಂಜೆಯವರೆಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬಂದಿಗಳು  ಆನೆಯ ಚಲನವಲ ಗಮನಿಸಿ ತೆರಳಿದರು.

ಶುಕ್ರವಾರ ಮತ್ತೆ ಕಾಡಾನೆಗೆ ಚಿಕಿತ್ಸೆ ನೀಡುವ ಪ್ರಯತ್ನ ನಡೆಯಲಿದೆ. ಚುಚ್ಚುಮದ್ದು ನೀಡುವ ವ್ಯವಸ್ಥೆಯ ಬಗ್ಗೆ ಕಾರ್ಯಯೋಜನೆ ನಡೆಯುತ್ತಿದೆ ಎಂದು ಅರಣ್ಯ ಇಲಾಖೆಯ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಸ್ತೆ ನಿರ್ಮಾಣದಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ
October 25, 2024
3:38 PM
by: The Rural Mirror ಸುದ್ದಿಜಾಲ
ಶೇ.61 ರಷ್ಟು ಹಿಂಗಾರು ಮಳೆ ಹೆಚ್ಚು |  7 ಜಿಲ್ಲೆಗಳಲ್ಲಿ ಬೆಳೆ , ಆಸ್ತಿಪಾಸ್ತಿ ಹಾನಿ | ಸಮೀಕ್ಷಗೆ ಸೂಚನೆ |
October 25, 2024
2:33 PM
by: The Rural Mirror ಸುದ್ದಿಜಾಲ
ಉಡುಪಿಯಲ್ಲಿ ಅಖಿಲ ಭಾರತೀಯ ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿದ ಯೋಗ ಗುರು ರಾಮದೇವ್ |
October 25, 2024
2:18 PM
by: The Rural Mirror ಸುದ್ದಿಜಾಲ
ಸ್ಥಳೀಯವಾಗಿ ಮೀನು ಸೇವನೆ ಪ್ರೋತ್ಸಾಹಿಸಲು  “ಮತ್ಸ್ಯವಾಹಿನಿ” ಯೋಜನೆ
October 25, 2024
2:06 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror