ಗಿರೀಶ್‍ಕಾರ್ನಾಡ್ ನಿಧನಕ್ಕೆ ಡಾ.ವೀರೇಂದ್ರ ಹೆಗ್ಗಡೆ ಸಂತಾಪ

Advertisement

ಧರ್ಮಸ್ಥಳ : ಗಿರೀಶ್‍ ಕಾರ್ನಾಡ್ ನಮ್ಮ ನಾಡಿನ ಶ್ರೇಷ್ಠ ಸಾಹಿತಿಗಳು ಹಾಗೂ ಕಲಾವಿದರು. ತಮ್ಮದೇಆದ ವ್ಯಕ್ತಿತ್ವ, ಸಾಧನೆ ಮತ್ತು ಪ್ರತಿಭೆಯಿಂದ ಬೆಳಗಿದ ಅವರುಕನ್ನಡ ನಾಡು-ನುಡಿಗೆಅಮೂಲ್ಯಕೊಡುಗೆ ನೀಡಿದ್ದಾರೆ. 1988 ರಡಿಸೆಂಬರ್ 8 ರಂದು ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಸಂದರ್ಭದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ 56 ನೆ ಅಧಿವೇಶನವನ್ನು ಅವರು ಉದ್ಘಾಟಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಧರ್ಮಸ್ಥಳದ  ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಗಿರೀಶ್‍ಕಾರ್ನಾಡ್ ನಿಧನಕ್ಕೆ ಡಾ.ವೀರೇಂದ್ರ ಹೆಗ್ಗಡೆ ಸಂತಾಪ"

Leave a comment

Your email address will not be published.


*