ಗೋಣಿಕೊಪ್ಪ ದಸರಾಕ್ಕೆ 30 ಲಕ್ಷ ರೂ. : ಮುಖ್ಯಮಂತ್ರಿ ಭರವಸೆ

September 12, 2019
8:00 PM

ಮಡಿಕೇರಿ :ದಕ್ಷಿಣ ಕೊಡಗಿನ ಗೋಣಿಕೊಪ್ಪಲಿನಲ್ಲಿ ನಡೆಯುವ ನಾಡ ಉತ್ಸವ ದಸರಾ ಆಚರಣೆಗೆ 30 ಲಕ್ಷ ರೂ. ಅನುದಾನವನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

Advertisement

ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರ ನೇತೃತ್ವದ ನಿಯೋಗ ಬುಧವಾರ ಬೆಂಗಳೂರು ಡಾಲರ್ಸ್ ಕಾಲೋನಿಯಲ್ಲಿರುವ ಮನೆಗೆ ತೆರಳಿ ಮುಖ್ಯಮಂತ್ರಿಗಳನ್ನು ಭೇಟಿಯಾದರು. ಗೋಣಿಕೊಪ್ಪಲು ದಸರಾ ಉತ್ಸವದ ಸಾಂಸ್ಕೃತಿಕ ಹಿನ್ನೆಲೆ, ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಟ್ಟರಲ್ಲದೆ, ಲಿಖಿತ ಮನವಿಯನ್ನು ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. ಈ ವರ್ಷ ಕಳೆದ ಸಾಲಿಗಿಂತ 10 ಲಕ್ಷದಷ್ಟು ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸುತ್ತಿರುವ ಬಗ್ಗೆ ನಿಯೋಗ ಸಂತಸ ವ್ಯಕ್ತಪಡಿಸಿದೆ.

ಮುಖ್ಯಮಂತ್ರಿಗಳ ಭೇಟಿಯ ಸಂದರ್ಭ ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ.ಹರೀಶ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ ಉಪಸ್ಥಿತರಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror