ಗ್ಯಾಸ್ ಸ್ಟೌವ್ ಹಚ್ಚಲು ಹೋಗಿ ಪ್ರಾಣ ಕಳೆದುಕೊಂಡ‌ ಬಾಲಕ

October 15, 2019
11:41 AM

ತುಮಕೂರು: ಅಮ್ಮಾ ನಾನೇ ಮ್ಯಾಗಿ ಮಾಡುತ್ತೀನಿ ಎಂದು ಗ್ಯಾಸ್ ಸ್ಟೌವ್ ಹಚ್ಚಿದ ಬಾಲಕ ಮೃತಪಟ್ಟ ಘಟನೆ ತುಮಕೂರು ನಗರದ ಕ್ರಿಶ್ಚಿಯನ್ ಸ್ಟ್ರೀಟ್‍ನಲ್ಲಿ ನಡೆದಿದೆ.

ನೋಯಲ್ ಪ್ರಸಾದ್(7) ಮೃತಪಟ್ಟ ಬಾಲಕ. ನೋಯಲ್ ಅಮ್ಮಾ ನಾನೇ ಮ್ಯಾಗಿ ತಯಾರಿಸುತ್ತೇನೆ ಎಂದು ತನ್ನ ತಾಯಿ ಬಳಿ ಹೇಳಿ ಗ್ಯಾಸ್ ಸ್ಟೌಚ್ ಹಚ್ಚಿದ್ದಾನೆ. ಈ ವೇಳೆ ಗ್ಯಾಸ್ ಸೋರಿಕೆ ಆಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.

ನೋಯಲ್ ಗ್ಯಾಸ್ ಸ್ಟೌವ್ ಆನ್ ಮಾಡಿದ ನಂತರ ಲೈಟರ್ ನಲ್ಲಿ ಬೆಂಕಿ ಹಚ್ಚುವುದಕ್ಕೆ ಲೇಟ್ ಮಾಡಿದ್ದಾನೆ. ಆದರೆ ಅಷ್ಟರಲ್ಲಾಗಲೇ ಗ್ಯಾಸ್ ಲೀಕ್ ಆಗಿ ನೋಯಲ್ ಸುತ್ತಮುತ್ತ ಹರಡಿಕೊಂಡಿದೆ. ನಿಧಾನವಾಗಿ ಬೆಂಕಿ ಹಚ್ಚಿದಕ್ಕೆ ನೋಯಲ್ ಗೆ ಬೆಂಕಿ ಹೊತ್ತಿಕೊಂಡಿದೆ.

ಈ ಘಟನೆಯಿಂದ ನೋಯಲ್‍ನನ್ನು ರಕ್ಷಣೆ ಮಾಡುವಷ್ಟರಲ್ಲಿ ಆತನಿಗೆ ತುಂಬಾ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆತನ ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೋಯಲ್ ಮೃತಪಟ್ಟಿದ್ದಾನೆ.

ಈ ಬಗ್ಗೆ ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror