ಗ್ರಾಮದ ಅಭಿವೃದ್ಧಿಯಲ್ಲಿ ಗ್ರಾ.ಪಂ.ಸದಸ್ಯನ ಜವಾಬ್ದಾರಿ ಮಹತ್ತರವಾದುದು- ಕೋಟ ಶ್ರೀನಿವಾಸ ಪೂಜಾರಿ

June 6, 2019
9:56 PM

ಬಾಳಿಲ: ತ್ರಿಸ್ತರ ಪಂಚಾಯತ್ ವ್ಯವಸ್ಥೆಯಲ್ಲಿ ತಳಮಟ್ಟದಲ್ಲಿ ಕೆಲಸ ಮಾಡುವ ಗ್ರಾಮ ಪಂಚಾಯತ್ ಸದಸ್ಯನ ಜವಾಬ್ದಾರಿ ಮಹತ್ತರವಾದುದು. ಗ್ರಾಮದ ಅಭಿವೃದ್ಧಿಯಲ್ಲಿ  ಆತನ ಜವಾಬ್ದಾರಿ ಮಹತ್ವದ್ದಾಗಿದೆ.  ಗ್ರಾಮ ಪಂಚಾಯತ್‍ಗಳು ಇಡೀ ಆಡಳಿತ ವ್ಯವಸ್ಥೆಯ ತಳಹದಿ ಎಂದು ಕರ್ನಾಟಕ ವಿಧಾನ ಪರಿಷತ್‍ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಹಾತ್ಮಾ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಬಾಳಿಲ ಗ್ರಾಮ ಪಂಚಾಯತ್‍ನ ನೂತನ ಕಟ್ಟಡ ಮತ್ತು ಆರ್.ಜಿ.ಎಸ್.ವೈ ಅನುದಾನದಿಂದ ನಿರ್ಮಾಣಗೊಂಡ ಮಿನಿ ಸಭಾಂಗಣದ ಉದ್ಘಾಟನಾ ಸಮಾರಂಭದಲ್ಲಿ ಮಿನಿ ಸಭಾಂಗಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತ್ ಜನರ ಪ್ರಥಮ ಪರಿಹಾರ ಕೇಂದ್ರ. ಸಾರ್ವಜನಿಕರಿಗೆ ಪೂರಕವಾಗುವ ರೀತಿಯಲ್ಲಿ ಗ್ರಾಮ ಪಂಚಾಯತ್ ಕಾರ್ಯನಿರ್ವಹಿಸಬೇಕು ಎಂದರು.
ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಸದ ನಳಿನ್‍ಕುಮಾರ್ ಕಟೀಲ್ ಗ್ರಾಮ ಪಂಚಾಯತ್ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. ಆಡಳಿತ ಹಾಗು ಪ್ರತಿಪಕ್ಷ ಜೊತೆಯಾಗಿ ಕಾರ್ಯಪ್ರವೃತ್ತರಾದಲ್ಲಿ ಆ ಗ್ರಾಮ ಆದರ್ಶ ಗ್ರಾಮವಾಗುವುದು. ಕ್ರಿಯಾತ್ಮಕ ರಾಜಕಾರಣವಿದ್ದಲ್ಲಿ ಅಭಿವೃದ್ಧಿಯ ಸಮೃದ್ದಿಯಾಗುವುದು ಎಂದರು.
ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ನೂನತ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಶುಭಹಾರೈಸಿದರು. ಕಟ್ಟಡ ನಿರ್ಮಾಣಕ್ಕೆ ಸ್ಥಳದಾನಗೈದ ಕೆದ್ಲ ನರಸಿಂಹ ಭಟ್ ಹಾಗು ಗುತ್ತಿಗೆದಾರ ಶಬ್ಬೀರ್ ಅವರನ್ನು ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್.ಅಂಗಾರ ವಹಿಸಿದರು. ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್, ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್ ಮನ್ಮಥ, ಪುಷ್ಪಾವತಿ ಬಾಳಿಲ, ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದ ಎಸ್.ರೈ, ಸದಸ್ಯೆ ಜಾಹ್ನವಿ ಕಾಂಚೋಡು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆರ್.ಮಧುಕುಮಾರ್, ಸುಳ್ಯ ಪಂಚಾಯತ್‍ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿ.ಹನುಮಂತರಾಯಪ್ಪ, ಕಳಂಜ ಬಾಳಿಲ ಪ್ರಾ. ಕೃ.ಪ.ಸ ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ, ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಉಪಾಧ್ಯಕ್ಷೆ ಹೇಮಲತಾ ಕಾಯಾರ ಉಪಸ್ಥಿತರಿದ್ದರು.
ರವೀಂದ್ರ ಸ್ವಾಗತಿಸಿ, ರಮೇಶ್ ರೈ ಅಗಲ್ಪಾಡಿ ವಂದಿಸಿದರು. ಯು.ರಾಧಾಕೃಷ್ಣ ರಾವ್ ಪ್ರಸ್ತಾವನೆಗೈದು, ಪಿಡಿಒ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?
July 29, 2026
2:00 PM
by: ಸಾಯಿಶೇಖರ್ ಕರಿಕಳ
ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!
July 29, 2026
6:52 AM
by: ದ ರೂರಲ್ ಮಿರರ್.ಕಾಂ
ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ
July 29, 2026
6:42 AM
by: ದ ರೂರಲ್ ಮಿರರ್.ಕಾಂ
ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ
July 28, 2026
11:25 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror