ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

July 15, 2019
7:20 AM

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

Advertisement

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ
June 14, 2025
7:30 AM
by: The Rural Mirror ಸುದ್ದಿಜಾಲ
ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು
June 13, 2025
9:29 PM
by: The Rural Mirror ಸುದ್ದಿಜಾಲ
ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
June 12, 2025
3:28 PM
by: The Rural Mirror ಸುದ್ದಿಜಾಲ
11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group