ಚಂದ್ರಯಾನ-2 ಉಡಾವಣೆ ಇಂದಿಲ್ಲ, ಮುಂದಕ್ಕೆ….

July 15, 2019
7:20 AM

ಶ್ರೀಹರಿಕೋಟ: ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಇಂದು  ಚಂದ್ರಯಾನ-2 ಉಡಾವಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಸ್ರೋ ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಬೆಳಗ್ಗೆ ಉಡಾವಣೆಗಿಂತ 56 ನಿಮಿಷ ಮೊದಲು ಟ್ವೀಟ್ ಮಾಡಿರುವ ಇಸ್ರೋ  ಸದ್ಯದಲ್ಲೇ ಉಡಾವಣೆಯ ಮುಂದಿನ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ  ತಿಳಿಸಲಾಗಿದೆ.

ಇಂದು ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ  ಭಾರತದ ಹೆಮ್ಮೆಯ ಜಿಎಸ್‌ಎಲ್‌ವಿ ಮಾಕ್-3 ಬಾಹುಬಲಿ ಉಡಾವಣಾ ವಾಹನದಲ್ಲಿ ಗಗನನೌಕೆ ಸಾಗಬೇಕಾಗಿತ್ತು. ಚಂದ್ರಯಾನದಲ್ಲಿ ರೋವರ್ ಚಲನೆಗೆ ನೆರವಾಗಲು ಕಾನ್ಪುರ ಐಐಟಿ ವಿಜ್ಞಾನಿಗಳು ವಿಶೇಷ ತಂತ್ರಾಂಶ ರೂಪಿಸಿದ್ದಾರೆ. ಚಲನೆಗೆ ನೆರವಾಗಲು ವಿಶೇಷ ಮೋಷನ್ ಪ್ಲ್ಯಾನಿಂಗ್ ಹಾಗೂ ಮ್ಯಾಪಿಂಗ್‌ನ ತಂತ್ರಾಂಶ ಇದಾಗಿದೆ. ಭಾರತದ ಅತಿ ಭಾರದ ರಾಕೆಟ್ ‘ಬಾಹುಬಲಿ’ ಎಂದು ಹೆಸರಿಸಲಾದ ಜಿಎಸ್​ಎಲ್​ವಿ ಎಂಕೆ-3, ಒಟ್ಟು 14 ವೈಜ್ಞಾನಿಕ ಉಪಕರಣಗಳನ್ನು ಹೊತ್ತೊಯ್ಯಲಿದೆ. ಇದರಲ್ಲಿ ನಾಸಾದ ಒಂದು ಉಪಕರಣವೂ ಇದೆ. ಈ ಹಿಂದೆ ಚಂದ್ರಯಾನ-1 ಮತ್ತು ಮಂಗಳಯಾನದ ಉಪಗ್ರಹ ವನ್ನು ಪಿಎಸ್​ಎಲ್​ವಿ ಕ್ಲಾಸ್​ನ ರಾಕೆಟ್​ನಿಂದ ಉಡಾವಣೆ ಮಾಡಲಾಗಿತ್ತು. ಯಾರೂ ಅಧ್ಯಯನ ನಡೆಸಿರದ ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯನ್ನು ಇಳಿಸಲು ಇಸ್ರೋ ಆಯ್ಕೆಮಾಡಿದೆ.  ಚಂದ್ರಯಾನ-2, ಚಂದ್ರ ಉಪಗ್ರಹದಲ್ಲಿ ಭಾರತದ ಎರಡನೆಯ ಅಧ್ಯಯನವಾಗಲಿದೆ.

ಉಡಾವಣೆಗೆ ಮುನ್ನ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಉಡಾವಣೆ ಸ್ಥಗಿತ ಮಾಡಲಾಗಿದ್ದು ಮುಂದೆ ಈ ಸದ್ಯದಲ್ಲಿ ಉಡಾವಣೆಗೊಳ್ಳಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ
ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ
June 10, 2026
2:56 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror