ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಇಬ್ಬರ ದಾರುಣ ಸಾವು

Advertisement

ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ.

Advertisement

ಯಾವುದೇ ಗಾಳಿಯೂ ಇರಲಿಲ್ಲ  ಮಳೆಯೂ ಇರಲಿಲ್ಲ. ಇದ್ದಕ್ಕಿದ್ದಂತೆ ನಡೆದ ಈ ಘಟನೆ ಜನರನ್ನು ತಲ್ಲಣಗೊಳಿಸಿದೆ.

Advertisement
Advertisement

ಧರ್ಮಸ್ಥಳದಿಂದ ಉಜಿರೆ ಕಡೆಗೆ ಕಾರಿನಲ್ಲಿ 4 ಜನ  ಪಯಣಿಸುತ್ತಿದ್ದರು. ಕಾರು ಸಿದ್ಧವನ ಎಂಬಲ್ಲಿನ ರಾಜ್ಯ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಮೇ ಫ್ಲವರ್  ಬೃಹತ್ ಮರವೊಂದು ಬುಡಸಮೇತ ಕುಸಿದು ಕಾರಿನ ಮೇಲೆ ಉರುಳಿದೆ. ಕಾರಿನ ಹಿಂಬದಿ ಕುಳಿತಿದ್ದ ಉಜಿರೆ ನಿನ್ನಿಕಲ್ಲು ನಿವಾಸಿ ಮೂಲತ ಪುದುವೆಟ್ಟು ಎಂಬಲ್ಲಿನ ಮುಕುಂದಅವರ ಪುತ್ರ ವಿಘ್ನೇಶ್ (21) ಸ್ಥಳದಲ್ಲೇ ಮೃತಪಟ್ಟರೆ , ಮಡಂತ್ಯಾರು ನಿವಾಸಿ ಕ್ಷಿತಿಜ್‍ಜೈನ್ (24) ಎಂಬುವರುಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಪುಂಜಾಲಕಟ್ಟೆ ಎಂಬಲ್ಲಿ ಹೋಗುತ್ತಿದ್ದಾಗ  ಮೃತಪಟ್ಟಿದ್ದಾರೆ.

 

Advertisement

ಸುಶಾಂತ ಹಾಗು ಹರ್ಷಿತ್ ಎಂಬ ಇನ್ನಿಬ್ಬರು ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಲ್ಲಿ  ಕಾರಿನ ಏರ್ ಬ್ಯಾಗ್ ತೆರೆದುಕೊಂಡದ್ದರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ಜನರೂ ಮಿತ್ರರಾಗಿದ್ದು ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

Advertisement

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ : ಇಬ್ಬರ ದಾರುಣ ಸಾವು"

Leave a comment

Your email address will not be published.


*