ಚಿಕಿತ್ಸೆಗೆ ಸ್ಪಂದಿಸುತ್ತಿರುವ ಪೇಜಾವರ ಶ್ರೀಗಳು

December 21, 2019
2:02 PM

ಮಂಗಳೂರು: ಉಸಿರಾಟದ ಸಮಸ್ಯೆಯಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಕಸ್ತೂರ್‌ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಇಂದು ಬೆಳಗ್ಗೆ 10 ಗಂಟೆಗೆ ಬಿಡುಗಡೆ ಮಾಡಿದ ಪ್ರಕಟಣೆ ತಿಳಿಸಿದೆ.

ಕಫ ಹಾಗೂ ಉಸಿರಾಟದ ಸಮಸ್ಯೆಯಿಂದ ಪೇಜಾವರ ಶ್ರೀಗಳು ಆಸ್ಪತ್ರೆಗೆ ದಾಖಲಾಗಿದ್ದರು. ಶ್ರೀಗಳ ಆರೋಗ್ಯ ಸ್ಥಿತಿ ವಿಚಾರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಗಳ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿದ್ದರು. ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಇಂದು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸುವ ಸಾಧ್ಯತೆಯಿದೆ.

ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಶ್ರೀಗಳ ಸ್ಥಿತಿ ಚಿಂತಾಜನಕವಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ನಿನ್ನೆ ಮಧ್ಯಾಹ್ನದವರೆಗೆ ಶ್ರೀಗಳ ದೇಹದಿಂದ ಮೂತ್ರ ವಿಸರ್ಜನೆಯಾಗಿರುವುದನ್ನು ನೋಡಿದ್ದೇನೆ. ಆದಷ್ಟು ಬೇಗ ಅವರು ಗುಣಮುಖರಾಗುತ್ತಾರೆ. ಯಾರೂ ಕೂಡ ಭೇಟಿ ಮಾಡಿ ತೊಂದರೆ ಕೊಡಬೇಡಿ. ಭಕ್ತರ ಭೇಟಿಯಿಂದ ಶ್ರೀಗಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ದೂರದಿಂದಲೇ ಅವರಿಗಾಗಿ ಪ್ರಾರ್ಥನೆ ಮಾಡಿ. ಶ್ರೀಗಳು ಗುಣಮುಖರಾಗುವಂತೆ ಪೂಜೆ ಪುನಸ್ಕಾರಗಳು ನಿರಂತರವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror