ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

May 13, 2019
7:14 AM

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ ಆನೆಗೆ ಮತ್ತೆ ಸಂಕಟ ಎದುರಾಗಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಮುಂಗಾಲಿಗೆ ಗಾಯಗಳಾಗಿದ್ದ ಸ್ಥಿತಿಯಲ್ಲಿದ್ದ ಆನೆಗೆ  ಚಿಕಿತ್ಸೆ ನೀಡಿ ಬಿಡಲಾಗಿತ್ತು. ಅರಣ್ಯ ಇಲಾಖೆಯ ಸಿಬಂದಿಗಳು ನಂತರ ಆನೆಯ ಚಲನವಲನ ಗಮನಿಸುತ್ತಿದ್ದರು. ಇದೀಗ ಭಾನುವಾರ ಮತ್ತೆ ಇನ್ನೊಂದು ಕಾಡಾನೆ ತಿವಿದು ಗಾಯಗೊಂಡಿರುವ ಬಗ್ಗೆ ಅರಣ್ಯ ಇಲಾಖಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

ಈ ವೇಳೆ ಸ್ಥಳೀಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಕಾಡಿನ ಆನೆ ಸ್ಥಳೀ ಯರನ್ನು ಬೆನ್ನಟ್ಟಿದೆ.  ಗಾಯಗೊಂಡಿದ್ದ ಆನೆಯ ದೇಹದಿಂದ ರಕ್ತ ಸೋರಿಕೆಯಾಗುತ್ತಿತ್ತು ಮತ್ತು ನೆಲದಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಚೆಲ್ಲಿತ್ತು. ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಗಾಯಗೊಂಡ ಆನೆ ಮೇಲೆ ಸ್ಥಳೀಯರು  ಪ್ರೀತಿ ತೋರುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ. ಜತೆಗೆ ನೀರು ಇತ್ಯಾದಿ ಆಹಾರವನ್ನು ಒದಗಿಸಿ ಆರೈಕೆ ನಡೆಸುತ್ತಿದ್ದಾರೆ. ಸ್ಥಳಿಯ ನಿವಾಸಿ ಸುಬ್ರಹ್ಮಣ್ಯ ಕೆ.ಎಸ್‍ಎಸ್ ಕಾಲೇಜಿನ ವಿದ್ಯಾರ್ಥಿ ದೀಪಕ್ ಕಳೆದ ಮೂರು ದಿನಗಳಿಂದ ಆನೆಗೆ ಆಹಾರ ಪೂರೈಕೆಯಲ್ಲಿ ನಿರತನಾಗಿದ್ದಾನೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತದ ಗಾಳಿಗೂ ಬಗ್ಗಿ ಉಳಿಯುವ ಅಡಿಕೆ ತಳಿ..! ಮೊಹಿತ್‌ನಗರ ತಳಿಗೆ ಹಲವು ರಾಜ್ಯಗಳಲ್ಲಿ ಬೇಡಿಕೆ
August 8, 2026
6:48 AM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror