ಚಿಕಿತ್ಸೆಗೊಂಡರೂ ಕಾಡಾನೆಗೆ ತಪ್ಪದ ಸಂಕಟ….! , ಮತ್ತೆ ಚಡಪಡಿಸುತ್ತಿರುವ ಕಾಡಾನೆ

May 13, 2019
7:14 AM

ಬಾಳುಗೋಡು: ಎರಡು ದಿನಗಳ ಹಿಂದಷ್ಟೇ ಚಿಕಿತ್ಸೆಗೆ ಒಳಗಾಗಿದ್ದ ಕಾಡಾನೆಗೆ ಮತ್ತೆ ಸಂಕಟಕ್ಕೆ ಒಳಗಾಗಿದೆ. ಕಾಡಿನಲ್ಲಿದ್ದ ಕಾಡಾನೆಗೆ ಇನ್ನೊಂದು ಆನೆ ತಿವಿದು ಮತ್ತೆ ನೋವಿಗೆ ಒಳಗಾಗಿದೆ. ನೋವಿನಿಂದ ಇದ್ದ ಆನೆಗೆ ಮತ್ತೆ ಸಂಕಟ ಎದುರಾಗಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಮುಂಗಾಲಿಗೆ ಗಾಯಗಳಾಗಿದ್ದ ಸ್ಥಿತಿಯಲ್ಲಿದ್ದ ಆನೆಗೆ  ಚಿಕಿತ್ಸೆ ನೀಡಿ ಬಿಡಲಾಗಿತ್ತು. ಅರಣ್ಯ ಇಲಾಖೆಯ ಸಿಬಂದಿಗಳು ನಂತರ ಆನೆಯ ಚಲನವಲನ ಗಮನಿಸುತ್ತಿದ್ದರು. ಇದೀಗ ಭಾನುವಾರ ಮತ್ತೆ ಇನ್ನೊಂದು ಕಾಡಾನೆ ತಿವಿದು ಗಾಯಗೊಂಡಿರುವ ಬಗ್ಗೆ ಅರಣ್ಯ ಇಲಾಖಾ ಸಿಬಂದಿಗಳು ಮಾಹಿತಿ ನೀಡಿದ್ದಾರೆ.

 

ಈ ವೇಳೆ ಸ್ಥಳೀಯರು ಆನೆಯನ್ನು ಶಬ್ಧ ಮಾಡಿ ಓಡಿಸುವ ಪ್ರಯತ್ನ ನಡೆಸಿ ಗಾಯಗೊಂಡ ಆನೆಯನ್ನು ಧಾಳಿಯಿಂದ ರಕ್ಷಿಸುವ ಪ್ರಯತ್ನಿಸಿದರು. ಈ ವೇಳೆ ಆನೆ ಕಾಡಿನ ಆನೆ ಸ್ಥಳೀ ಯರನ್ನು ಬೆನ್ನಟ್ಟಿದೆ.  ಗಾಯಗೊಂಡಿದ್ದ ಆನೆಯ ದೇಹದಿಂದ ರಕ್ತ ಸೋರಿಕೆಯಾಗುತ್ತಿತ್ತು ಮತ್ತು ನೆಲದಲ್ಲಿ ಭಾರಿ ಪ್ರಮಾಣದಲ್ಲಿ ರಕ್ತ ಚೆಲ್ಲಿತ್ತು. ಧಾಳಿಯಿಂದ ಬೆದರಿದ ಆನೆ ಕಾಡಿನತ್ತ ತೆರಳಲು ಹಿಂದೇಟು ಹಾಕುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ. ಗಾಯಗೊಂಡ ಆನೆ ಮೇಲೆ ಸ್ಥಳೀಯರು  ಪ್ರೀತಿ ತೋರುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆನೆಗೆ ಆಹಾರದ ಕೊರತೆ ಆಗದಂತೆ ಬೈನೆಮರದ ಮೇವನ್ನು ಸ್ಥಳಿಯರು ಕಾಡಿಗೆ ತೆಗೆದುಕೊಂಡು ಹೋಗಿ ಆನೆಗೆ ಪೂರೈಸುತ್ತಿದ್ದಾರೆ. ಜತೆಗೆ ನೀರು ಇತ್ಯಾದಿ ಆಹಾರವನ್ನು ಒದಗಿಸಿ ಆರೈಕೆ ನಡೆಸುತ್ತಿದ್ದಾರೆ. ಸ್ಥಳಿಯ ನಿವಾಸಿ ಸುಬ್ರಹ್ಮಣ್ಯ ಕೆ.ಎಸ್‍ಎಸ್ ಕಾಲೇಜಿನ ವಿದ್ಯಾರ್ಥಿ ದೀಪಕ್ ಕಳೆದ ಮೂರು ದಿನಗಳಿಂದ ಆನೆಗೆ ಆಹಾರ ಪೂರೈಕೆಯಲ್ಲಿ ನಿರತನಾಗಿದ್ದಾನೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!
June 14, 2026
11:58 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror