ಚೇತರಿಕೆ ಕಾಣದ ಕಾಡಾನೆ : ಹೆಚ್ಚಿದ ಜನರ ಕಾಳಜಿ

May 16, 2019
9:09 AM

ಬಾಳುಗೋಡು: ಛೆ…… ಆನೆಗೆ ಕಡಿಮೆಯೇ ಆಗಿಲ್ಲ…!.  ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ. ಈಗ ಚೇತರಿಕೆ ಕಂಡುಬಂದಿಲ್ಲ. ಕೀವು ತುಂಬಿದ ಕಾಲಿನಲ್ಲಿ ಅತ್ತಿತ್ತ  ಓಡಾಡುತ್ತಿದೆ.

ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸಲಗದ ಆರೋಗ್ಯದಲ್ಲಿ ಹೆಚ್ಚಿನ‌ ಚೇತರಿಕೆ ಕಂಡುಬಂದಿಲ್ಲ . ಸ್ಥಳೀಯ ಮಂದಿ  ಕಾಡಿಗೆ ತೆರಳಿ ಆನೆಯ ಚಲನವಲನವನ್ನು ವೀಕ್ಷಿಸಿದ್ದಾರೆ. ಜೊತೆಗೆ ಬೈನೆ ಮರದ ಆಹಾರವನ್ನು ಆನೆಗೆ ನೀಡಿ ಬಂದಿದ್ದಾರೆ.ಈ ವೇಳೆ ಆನೆಯು ಚಿಕಿತ್ಸೆ ಪಡೆದ ನಂತರದಲ್ಲಿ ಕೂಡ ಚೇತರಿಕೊಳ್ಳದಿರುವುದು ಅವರಿಗೆ ಕಂಡುಬಂದಿದೆ.ಆನೆಯು ಶಕ್ತಿ ಹೀನವಾಗಿದ್ದು ನೋವು ಉಲ್ಬಣಿಸಿ ನಡೆಯಲು ಕಷ್ಟ ಪಡುತ್ತಿದೆ.

ಈ ನಡುವೆ  ಅರಣ್ಯ ಇಲಾಖೆ ಸಿಬಂದಿಗಳು  ಪಟಾಕಿ ಸಿಡಿಸಿ  ಆನೆಯನ್ನು ಓಡಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆನೆಯು ಓಡಲಾಗದೆ ಚಡಪಡಿಸುತಿದ್ದ ಬಗ್ಗೆಯು ಸ್ಥಳಿಯರು ಮಾಹಿತಿ ನೀಡಿದ್ದು   ಇದೇ ರೀತಿ ಆನೆಯನ್ನು ಬಿಟ್ಟರೆ ಅದರ ಆರೋಗ್ಯ ಪೂರ್ಣವಾಗಿ ಹದಗೆಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror