ಛೆ…… ಕಾಡಾನೆ ಸತ್ತಿತಲ್ಲ ಮಾರಾಯ್ರೆ…….

May 29, 2019
6:41 PM

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆ ಆಗಾಗ ನೋಡಿತು. ಆದರೆ  ಮತ್ತೆ ಮತ್ತೆ ಕಾಡಾನೆಗಳ ಕಾದಾಟದಲ್ಲಿ  ಗಾಯಗೊಂಡಿತು. ಕೊನೆಗೆ ಬುಧವಾರ ಕೊನೆಯುಸಿರೆಳೆಯಿತು. ಕಾಡಾನೆ ಬಾಳುಗೋಡಿನ ಕೃಷಿಕರಿಗೆ ನಿತ್ಯವೂ ಕಾಟ ಕೊಡುತ್ತಿದ್ದರೂ ಜನ ಹೇಳುವ ಮಾತು,  ಛೇ… ಆನೆ ಸತ್ತಿತಲ್ಲ ಮಾರಾಯ್ರೆ ಎಂದು ಬೇಸರಿಸುತ್ತಾರೆ.

Advertisement
Advertisement
Advertisement

 

Advertisement

 

Advertisement

ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು  ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆಯ ಸಿಬಂದಿಗಳ  ಗಮನಕ್ಕೆ ಬಂದು ಪರಿಶೀಲನೆ ಮಾಡಿದಾಗ  ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು  ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿತ್ತು. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿತ್ತು.  ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿತ್ತು. ನಂತರ ಅರಿವಳಿಕೆ ನೀಡಿ ಚಿಕಿತ್ಸೆ ನೀಡಲಾಯಿತು.

 

Advertisement

 

Advertisement

ಆ ಬಳಿಕ ಕೊಂಚ ಸುಧಾರಣೆ ಕಂಡಿತು. ಆದರೆ ಮತ್ತೆ ಕಾಡಾನೆಗಳು ನಡುವೆ ಕಾದಾಟ ನಡೆಯಿತು. ಹೀಗಾಗಿ ಮತ್ತೆ ಆನೆ ಗಾಯಗೊಂಡು ಊರಿನ ಹತ್ತಿರ ಬರತೊಡಗಿತು. ಜನರ ಪ್ರೀತಿ ಹೆಚ್ಚಾಯಿತು. ಬೈನೆ ಸೇರಿದಂತೆ ಆಹಾರ ಕೊಡಲು ಆರಂಭಿಸಿದರು. ಬಳಿಕ ಹಾಗೆಯೇ ಆರೋಗ್ಯಗೊಂಡು ಕಾಡಿನ ಕಡೆಗೆ ಹೆಜ್ಜೆ ಹಾಕಿತು. ಮತ್ತೆ ಕಾಡಾನಗೆಳ ನಡುವೆ ಕಾದಾಟವಾಯಿತು. ಈಚೆಗೆ ಕೆಲವು ದಿನಗಳಿಂದ ಕಾಡಿನ ಕಡೆಗೆ ಯಾರೂ ಹೋಗಿರಲಿಲ್ಲ. ಬುಧವಾರ ಆನೆ ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂತು. ಊರ ಮಂದಿ ವಿಷಾದ ವ್ಯಕ್ತಪಡಿಸುತ್ತಾರೆ.

 

Advertisement

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೆಡಿಎಸ್‌ ಅಭ್ಯರ್ಥಿ, ಬಿಜೆಪಿ ಚಿಹ್ನೆ….! |ಡಾ.ಮಂಜುನಾಥ್‌ರನ್ನ ಬಿಜೆಪಿಯಿಂದ ನಿಲ್ಲಿಸಿದ್ದೇವೆ : ರಾಜಕೀಯ ತಂತ್ರಗಾರಿಕೆ ವರ್ಕೌಟ್‌ ಆಗಬೇಕು – ಹೆಚ್‌ ಡಿ ಕುಮಾರಸ್ವಾಮಿ
April 18, 2024
2:44 PM
by: The Rural Mirror ಸುದ್ದಿಜಾಲ
ದಕ್ಷಿಣ ಭಾರತದಲ್ಲಿ ಬೆಂಗಳೂರು ಏರ್‌ಪೋರ್ಟ್‌ಗೆ ಒಲಿದ ಏವಿಯೇಷನ್‌ ಹಬ್‌ ಆಗುವ ಭಾಗ್ಯ | ಏನಿದು ಏವಿಯೇಷನ್‌ ಹಬ್‌? | ಏರ್ ಇಂಡಿಯಾ ಘೋಷಣೆ
April 17, 2024
2:31 PM
by: The Rural Mirror ಸುದ್ದಿಜಾಲ
ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು
April 16, 2024
12:54 PM
by: The Rural Mirror ಸುದ್ದಿಜಾಲ
ರಾಜ್ಯಕ್ಕೆ ಸ್ಟಾರ್‌ ಪ್ರಚಾರಕರ ದಂಡು | ಮೋದಿ ಬೆನ್ನಲ್ಲೇ ಕರ್ನಾಟಕಕ್ಕೆ ರಾಹುಲ್ ಗಾಂಧಿ | ಯಾವೆಲ್ಲಾ ಕ್ಷೇತ್ರದಲ್ಲಿ ರಾಹುಲ್ ಮತಬೇಟೆ..?
April 11, 2024
11:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror