ಛೆ…… ಕಾಡಾನೆ ಸತ್ತಿತಲ್ಲ ಮಾರಾಯ್ರೆ…….

May 29, 2019
6:41 PM

ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆ ಆಗಾಗ ನೋಡಿತು. ಆದರೆ  ಮತ್ತೆ ಮತ್ತೆ ಕಾಡಾನೆಗಳ ಕಾದಾಟದಲ್ಲಿ  ಗಾಯಗೊಂಡಿತು. ಕೊನೆಗೆ ಬುಧವಾರ ಕೊನೆಯುಸಿರೆಳೆಯಿತು. ಕಾಡಾನೆ ಬಾಳುಗೋಡಿನ ಕೃಷಿಕರಿಗೆ ನಿತ್ಯವೂ ಕಾಟ ಕೊಡುತ್ತಿದ್ದರೂ ಜನ ಹೇಳುವ ಮಾತು,  ಛೇ… ಆನೆ ಸತ್ತಿತಲ್ಲ ಮಾರಾಯ್ರೆ ಎಂದು ಬೇಸರಿಸುತ್ತಾರೆ.

 

 

ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು  ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆಯ ಸಿಬಂದಿಗಳ  ಗಮನಕ್ಕೆ ಬಂದು ಪರಿಶೀಲನೆ ಮಾಡಿದಾಗ  ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು  ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿತ್ತು. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿತ್ತು.  ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿತ್ತು. ನಂತರ ಅರಿವಳಿಕೆ ನೀಡಿ ಚಿಕಿತ್ಸೆ ನೀಡಲಾಯಿತು.

 

 

ಆ ಬಳಿಕ ಕೊಂಚ ಸುಧಾರಣೆ ಕಂಡಿತು. ಆದರೆ ಮತ್ತೆ ಕಾಡಾನೆಗಳು ನಡುವೆ ಕಾದಾಟ ನಡೆಯಿತು. ಹೀಗಾಗಿ ಮತ್ತೆ ಆನೆ ಗಾಯಗೊಂಡು ಊರಿನ ಹತ್ತಿರ ಬರತೊಡಗಿತು. ಜನರ ಪ್ರೀತಿ ಹೆಚ್ಚಾಯಿತು. ಬೈನೆ ಸೇರಿದಂತೆ ಆಹಾರ ಕೊಡಲು ಆರಂಭಿಸಿದರು. ಬಳಿಕ ಹಾಗೆಯೇ ಆರೋಗ್ಯಗೊಂಡು ಕಾಡಿನ ಕಡೆಗೆ ಹೆಜ್ಜೆ ಹಾಕಿತು. ಮತ್ತೆ ಕಾಡಾನಗೆಳ ನಡುವೆ ಕಾದಾಟವಾಯಿತು. ಈಚೆಗೆ ಕೆಲವು ದಿನಗಳಿಂದ ಕಾಡಿನ ಕಡೆಗೆ ಯಾರೂ ಹೋಗಿರಲಿಲ್ಲ. ಬುಧವಾರ ಆನೆ ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂತು. ಊರ ಮಂದಿ ವಿಷಾದ ವ್ಯಕ್ತಪಡಿಸುತ್ತಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror