ಜನರೆಡೆಗೆ ತೆರಳಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ : ಸಾರ್ವಜನಿಕರಿಂದ ಶ್ಲಾಘನೆ

October 14, 2019
10:26 PM

ಸುಬ್ರಹ್ಮಣ್ಯ: ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು 3 ವರ್ಷ ಅವಧಿ ಪೂರೈಸಿ ಅವಧಿ ಕೊನೆಗೊಂಡಿದೆ. ಕಳೆದ 3 ವರ್ಷಗಳಿಂದ ಜನಪರವಾದ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳ ಮೂಲಕ ದೇವಸ್ಥಾನದ ಆಡಳಿತವೂ ಜನರೆಡೆಗೆ ತೆರಳಬಹುದು ಎಂದು ತೋರಿಸಿದೆ. ಹೀಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ, ಆಡಳಿತ ಮಂಡಳಿಗೆ ಅಭಿನಂದನಾ ಸಭೆಯೂ ನಡೆದಿದೆ.

Advertisement

2016 ಅ‌.15 ರಂದು ನಿತ್ಯಾನಂದ ಮುಂಡೋಡಿ ನೇತೃತ್ವದ ವ್ಯವಸ್ಥಾಪನಾ ಸಮಿತಿ  ದೇವಸ್ಥಾನದ ಅಧಿಕಾರ ಸ್ವೀಕರಿಸಿತ್ತು. ಜನಪರವಾದ ಕೆಲಸ ಕಾರ್ಯಗಳು ಹಾಗೂ ಧಾರ್ಮಿಕ ವಿಚಾರಗಳಿಗೆ ಆದ್ಯತೆ ನೀಡಿತ್ತು. ಕ್ಷೇತ್ರದ ಅಭಿವೃದ್ಧಿ ಹಾಗೂ ಕ್ಷೇತ್ರದಲ್ಲಿ ನಡೆಯುವ ಕೆಲವು ಕ್ಷೇತ್ರ ವಿರೋಧಿ ಕಾರ್ಯಗಳ ನಿಯಂತ್ರಣಕ್ಕೂ ಪ್ರಯತ್ನ ಮಾಡಿತ್ತು ಎಂದು ಸಾರ್ವಜನಿಕರು ಹೇಳುತ್ತಾರೆ. ಹೀಗಾಗಿಯೇ ಅಭಿನಂದನಾ ಕಾರ್ಯಕ್ರಮವೂ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ರವೀಂದ್ರ ಎಂ.ಎಚ್ ವರ್ಗಾವಣೆಗೊಂಡ ಬಳಿಕ ಪುತ್ತೂರು ಸಹಾಯಕ ಕಮೀಶನರ್ ಅವರು ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕವಾಗಿದ್ದು ಇದೀಗ  ಮಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಆಡಳಿತ ಮಂಡಳಿ ವತಿಯಿಂದ  ಅ.14 ರಂದು ಕ್ಷೇತ್ರದಲ್ಲಿ ನಡೆಸಲಾಗಿದ್ದ ಹಲವು ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆಗೆ ಸಿದ್ಧತೆಗಳನ್ನು ನಡೆಸಿತ್ತು.ಸೋಮವಾರ ಬೆಳಗ್ಗೆ ಉದ್ಘಾಟನೆಗಳು ಆಗಬೇಕಿತ್ತು. ಕೊನೆ ಕ್ಷಣದಲ್ಲಿ ಉದ್ಘಾಟನೆ ಕಾರ್ಯಕ್ರಮಗಳು ರದ್ದುಗೊಂಡಿವೆ.

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |
July 3, 2025
12:24 AM
by: The Rural Mirror ಸುದ್ದಿಜಾಲ
ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ
July 3, 2025
12:10 AM
by: The Rural Mirror ಸುದ್ದಿಜಾಲ
ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?
July 3, 2025
12:00 AM
by: The Rural Mirror ಸುದ್ದಿಜಾಲ
ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ
July 2, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group