ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
Advertisement
ಬಾಳಿಲದಲ್ಲಿ ಕ್ಲಿನಿಕ್ ಹೊಂದಿದ್ದ ಡಾ|ಪಿ ಜಿ ಎಸ್ ಪ್ರಕಾಶ್ ಗ್ರಾಮೀಣ ಭಾಗದ ಜನಾನುರಾಗಿ ವೈದ್ಯರಾಗಿದ್ದರು. ಕಡಿಮೆ ದರದಲ್ಲಿ ಔಷಧಿ ಹಾಗೂ ನಿಖರ ಚಿಕಿತ್ಸೆ ಮೂಲಕ ಹೆಸರುವಾಸಿಯಾಗಿ ಬೆಳ್ಳಾರೆ ಸಹಿತ ವಿವಿದೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಇದೀಗ ಡಾ|ಪಿ ಜಿ ಎಸ್ ಪ್ರಕಾಶ್ ನಿಧನರಾಗಿರುವುದು ಗ್ರಾಮೀಣ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.
Advertisement
ಬುಧವಾರ ರಾತ್ರಿಯೂ ಕ್ಲಿನಿಕ್ ಗೆ ಆಗಮಿಸಿದ ರೋಗಿಗಳಿಗೆ ಔಷಧಿ ನೀಡಿದ್ದರು. ಬಳಿಕ ಮನೆಯ ಗೇಟ್ ಹಾಗೂ ಕ್ಲಿನಿಕ್ ಬಾಗಿಲು ಹಾಕಲು ತೆರಳಿದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ವಿಷಯ ತಿಳಿದ ತಕ್ಷಣವೇ ಮನೆಯವರು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement