ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್ ಮುತ್ತಪ್ಪ ರೈ ನಿಧನ

May 15, 2020
9:11 AM

ಬೆಂಗಳೂರು:  ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.

ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಭೂಗತ ಲೋಕದಲ್ಲಿ ಗುರುತಿಸಿಕೊಂಡು ನಂತರ ಮನಪರಿವರ್ತನೆಯಾಗಿ ಸಮಾಜ ಸೇವೆಯಲ್ಲಿ  ತೊಡಗಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ಕನ್ನಡಿಗರಿಗೆ ನೆರವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.

ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಇಚ್ಚೆಯಂತೆ ಬಂಟ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಬಿಡದಿಯಲ್ಲಿ  ಅಂತಿಮ ಸಂಸ್ಕಾರ ನಡೆಯಲಿದ್ದು ಮುತ್ತಪ್ಪ ರೈ ಅವರ ಹಿರಿಯ ವಿದೇಶದದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಅವರ ಕಿರಿಯ ಮಗ  ಎಲ್ಲಾ ಅಂತಿಮ ವಿಧಿವಿಧಾನ ನಡೆಸಲಿದ್ದು  ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಮುತ್ತಪ್ಪ ರೈ ಅವರ ಆಪ್ತ ವಲಯ ತಿಳಿಸಿದೆ.

2013 ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror