ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು : ವಿಶೇಷ ಉಪನ್ಯಾಸ

November 6, 2019
10:36 PM

ಸುಳ್ಯ: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು.

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ ಕಥೆಯಿದೆ , ಸ್ವಾತಂತ್ರ್ಯದ ಸಿಹಿಯ ಹಿಂದಿನ ಕಹಿಯನ್ನು ತಿಳಿದುಕೊಳ್ಳಬೇಕು ಮತ್ತು ಸ್ವಾತಂತ್ರ್ಯದ ಸದುಪಯೋಗ ಮುಖ್ಯ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ.ಪೂ‌.ಕಾಲೇಜಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯರು ಮಾತನಾಡಿ ಇತಿಹಾಸವನ್ನು ಏಕಮುಖವಾಗಿ ನೋಡುವುದಲ್ಲ , ಈ ನೆಲದ ಅಂತರಾಳದ ನೋವನ್ನು ತಿಳಿದುಕೊಳ್ಳಬೇಕು , ಇತಿಹಾಸದ ದುರಂತ ಮನುಕುಲಕ್ಕೆ ಪಾಠವಾಗಬೇಕು ಮತ್ತು ಹೊರಜಗತ್ತಿನ ಸಂಘರ್ಷಗಳು ಬಲಿಷ್ಠವಾಗಿ ಬೆಳೆಯಲು ಸಹಾಯವಾಗಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮಾನವಿಕ ಸಂಘದ ನಿರ್ದೇಶಕಿ ಉಪನ್ಯಾಸಕಿ ರೇಷ್ಮಾ, ವಿದ್ಯಾರ್ಥಿ ಕ್ಷೇಮಪಾಲಕ ಲಕ್ಷ್ಮಣ್ ಏನೆಕಲ್ ಉಪಸ್ಥಿತರಿದ್ದರು.

ಇತಿಹಾಸ ಉಪನ್ಯಾಸಕರಾದ ಹರೀಶ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಲಕ್ಷ್ಮಣ್ ಏನೆಕಲ್ ಅವರು ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಅತಿಥಿಗಳೊಡನೆ ಸಂವಾದ ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ
July 19, 2026
9:41 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror