ಜಾಲ್ಸೂರು : ಪಯಸ್ವಿನಿ ಪ್ರೌಢಶಾಲಾ ಪಯಸ್ವಿನಿ ರಂಗಮಂದಿರ ಉದ್ಘಾಟನೆ

February 18, 2020
9:59 PM

ಸುಳ್ಯ: ಜಾಲ್ಸೂರಿನ ಪಯಸ್ವಿನಿ ಅನುದಾನಿತ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಯಸ್ವಿನಿ ರಂಗಮಂದಿರವನ್ನು ಸುಳ್ಯ ಶಾಸಕ ಎಸ್. ಅಂಗಾರ ಉದ್ಘಾಟಿಸಿದರು. ದೇಶದಲ್ಲಿ ಏಕಶಿಕ್ಷಣ ನೀತಿ ಜಾರಿಗೆ ಯಾಗಬೇಕು. ಇದರಿಂದ ಸಮಾನತೆಯ ಶಿಕ್ಷಣ ಕಟ್ಟಕಡೆಯ ವ್ಯಕ್ತಿಗೂ ದೊರೆಯುತ್ತದೆ. ಅಲ್ಲದೆ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣದ ಕಡೆಯೂ ಗಮನ ಹರಿಸುವ ಕೆಲಸ ಸರಕಾರ ಮಟ್ಟದಲ್ಲಿ ಆಗಬೇಕು ಎಂದರು.

Advertisement
Advertisement
Advertisement
Advertisement

ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಾಲ್ಸೂರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಪಯಸ್ವಿನಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಪ್ರೌಢಶಾಲಾ ಸಂಚಾಲಕ ಜಾಕೆ ಸದಾನಂದ, ಉಪಾಧ್ಯಕ್ಷ ಇಬ್ರಾಹಿಂ ಕತ್ತರ್, ತಾ.ಪಂ. ಸದಸ್ಯ ತೀರ್ಥರಾಮ ಜಾಲ್ಸೂರು, ಗ್ರಾ.ಪಂ. ಸದಸ್ಯರುಗಳಾದ ಜನಾರ್ದನ ಆಚಾರ್ಯ, ರುಕ್ಮಿಣಿ ನಾರಾಯಣ ಗೌಡ ಕದಿಕಡ್ಕ, ಶಾಲಾ ಮುಖ್ಯಶಿಕ್ಷಕಿ ಕುಸುಮಾವತಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ವೇದಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಆಡಳಿತ ಮಂಡಳಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ ಸ್ವಾಗತಿಸಿ, ಪ್ರೌಢಶಾಲಾ ಆಡಳಿತ ಮಂಡಳಿ ನಿರ್ದೇಶಕರಾದ ಜಯರಾಮ ರೈ ಜಾಲ್ಸೂರು ಹಾಗೂ ಆಡಳಿತ ಮಂಡಳಿ ಜತೆ ಕಾರ್ಯದರ್ಶಿ ಶ್ಯಾಮ್ ಕುಮಾರ್ ಮರಸಂಕ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಂಚಾಲಕ ಜಾಕೆ ಸದಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಾಲ್ಸೂರು ಗ್ರಾ.ಪಂ.ವತಿಯಿಂದ ನಿರ್ಮಾಣವಾದ ಶಾಲಾ ಕಾಂಕ್ರಿಟ್ ರಸ್ತೆ ಮತ್ತು ಶಾಲಾ ಆಡಳಿತ ಮಂಡಳಿ ಖಜಾಂಜಿ ಶ್ರೀನಿವಾಸ ಭಟ್ ಅವರು ಕೊಡುಗೆಯಾಗಿ ನೀಡಿದ್ದ ಗೇಟ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾಂಕ್ರೀಟ್ ರಸ್ತೆಯನ್ನು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್ ಉದ್ಘಾಟಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror