ಜಿಲ್ಲಾ ಯುವ ಪ್ರಶಸ್ತಿ- ಅರ್ಜಿ ಆಹ್ವಾನ

October 5, 2019
8:27 PM

ಮಂಗಳೂರು : 2019-20ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಮುದಾಯ ಅಭಿವೃದ್ಧಿ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಿರುವ ನೊಂದಾಯಿತ ಯುವಕ/ಯುವತಿ ಸಂಘಗಳಿಗೆ ಹಾಗೂ ಯುವಜನರಿಗೆ ಜಿಲ್ಲಾ ಯುವ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿ ನಮೂನೆ ಮತ್ತು ದಾಖಲೆಗಳನ್ನು ಅಕ್ಟೋಬರ್ 25ರೊಳಗೆ ಸಲ್ಲಿಸಬೇಕು.

ಆಸಕ್ತ ಯುವಕ/ಯುವತಿಯರು 15 ರಿಂದ 35 ವಯೋಮಿತಿಯೊಳಗಿನವರಾಗಿರ ಬೇಕು. ವೈಯಕ್ತಿಕ ಮತ್ತು ಸಾಂಘಿಕ ಪ್ರಸ್ತಾವನೆಯನ್ನು ತಯಾರಿಸುವಾಗ ಎಪ್ರಿಲ್ 1, 2018ರಿಂದ ಮಾರ್ಚ್ 31, 2019 ರವರೆಗೆ ಯುವಕ/ಯುವತಿ ಮಂಡಲ ಹಾಗೂ ಯುವಕ/ಯುವತಿಯರು ಕೈಗೊಂಡಿರುವ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.ಈ ಅವಧಿಯಲ್ಲಿ ಕಾರ್ಯಕ್ರಮ ನಡೆಸಿದ ಅಥವಾ ಸಹಕರಿಸಿದ ಬಗ್ಗೆ ಕಾರ್ಯಕ್ರಮದ ದಿನಾಂಕ, ಭಾವಚಿತ್ರ, ಪತ್ರಿಕಾ ತುಣುಕು, ಆಮಂತ್ರಣ ಪತ್ರಿಕೆ ಇತ್ಯಾದಿಗಳ ಮೂಲ ಪ್ರತಿಗಳನ್ನು ಎ-4 ಅಳತೆಯಲ್ಲಿ ಸಲ್ಲಿಸಬೇಕು. ಸ್ಲೈಡ್ ಹಾಗೂ ವಿಡಿಯೋಗಳ ದಾಖಲೆಗಳನ್ನು ಒದಗಿಸಬೇಕು.

ವೈಯಕ್ತಿಕ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಯುವಕ/ಯುವತಿಯರು ಯಾವುದೇ ಕ್ರಿಮಿನಲ್ ಮೊಕದ್ದಮೆಗಳಿಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಲ್ಲಿಸಬೇಕು. ಅರ್ಜಿದಾರರು/ಯುವಸಂಘಗಳು ಇಲಾಖೆಯು ಆಯ್ಕೆ ಮಾಡಿರುವ ಸಮುದಾಯ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿರಬೇಕು.ಹೆಚ್ಚಿನ ಮಾಹಿತಿ ಹಾಗೂ  ಅರ್ಜಿ ನಮೂನೆಗಾಗಿ  ದೂರವಾಣಿ ಸಂಖ್ಯೆ :- 0824-2451264 ನ್ನು ಸಂಪರ್ಕಿಸಬಹುದು ಎಂದು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೆಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು ಇವರನ್ನು ಸಂಪರ್ಕಿಸ ಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror