ಜು.11 : ‘ಕ್ಯಾಂಪ್ಕೊ ದಿನ’

July 10, 2019
9:30 AM

ಮಂಗಳೂರು: ಜುಲೈ 11 ರಂದು ಕ್ಯಾಂಪ್ಕೋ ಸಂಸ್ಥೆಯು  ಯಶಸ್ವಿ 46 ವರ್ಷಗಳ ಸೇವೆಯನ್ನು ಪೂರೈಸಿ 47 ನೇ ವರ್ಷಕ್ಕೆ  ಕಾಲಿಡುತ್ತಿದೆ.

ಅಡಿಕೆ ಕೃಷಿಕರ ಕಣ್ಮಣಿ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪೊ ಅಡಿಕೆ ಮಾರುಕಟ್ಟೆಯು ದಾರುಣ ಸ್ಥಿತಿಯಲ್ಲಿದ್ದಾಗ ಕೃಷಿಕರ ಉದ್ಧಾರಕ್ಕಾಗಿ ವಾರಣಾಶಿ ಸುಬ್ರಾಯ ಭಟ್ಟರ ಸಂಘಟನಾ ಚಾತುರ್ಯ ಮತ್ತು ದೂರದರ್ಶಿತ್ವದ ಫಲವಾಗಿ ಕೃಷಿಕ ಸಮುದಾಯದ ಸಹಕಾರದೊಂದಿಗೆ ಆಪದ್ಬಾಂಧವನಾಗಿ ಜನ್ಮ ತಾಳಿದ ಸಂಸ್ಥೆಯು ಕ್ರಮೇಣ ಕೊಕ್ಕೋ, ರಬ್ಬರ್ ಮತ್ತು ಕಾಳುಮೆಣಸುಗಳನ್ನು ವ್ಯಾಪಿಸಿಕೊಂಡು ಇದೀಗ 2018-19ನೇ ಹಣಕಾಸು ವರ್ಷದಲ್ಲಿ ಸಾರ್ವಕಾಲಿಕ ದಾಖಲೆಯ 1880 ಕೋಟಿ ರೂಪಾಯಿಗಳ ವ್ಯವಹಾರವನ್ನು ದಾಖಲಿಸಿದೆ.

ಸಂಸ್ಥೆಯು  ಜುಲೈ 11ನೇ ತಾರೀಕಿನಂದು  ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮವನ್ನು ಹಿರಿಯ ಸಹಕಾರಿ ಮತ್ತು ಸಾಹಿತಿ  ಏರ್ಯ ಲಕ್ಷ್ಮೀನಾರಾಯಣ ಆಳ್ವ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ  ಎಸ್.ಆರ್.ಸತೀಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಯಾಂಪ್ಕೊದ ಪ್ರಥಮ ವ್ಯವಸ್ಥಾಪಕ ನಿರ್ದೇಶಕರಾಗಿದ್ದ  ಜಿ.ಕೆ.ಸಂಗಮೇಶ್ವರ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್, ನಿವೃತ್ತ ಐ.ಎ.ಎಸ್. ಅಧಿಕಾರಿ ವಿ.ವಿ.ಭಟ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…
March 10, 2026
1:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ
March 9, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror