ಸಂಪಾಜೆ: ಮೇ.30 ರಂದು ನರೇಂದ್ರ ಮೋದಿಯವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವುದರಿಂದ ಸಂಪಾಜೆ ಗ್ರಾಮದಲ್ಲಿ ಉಚಿತ ರಕ್ತದಾನ ಶಿಬಿರವನ್ನು ಜೂ.1 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಸಂಪಾಜೆ-ಕೊಡಗು ಸ್ಥಾನೀಯ ಸಮಿತಿ ಪ್ರಕಟಣೆ ತಿಳಿಸಿದೆ.
ಸರ್ವರೊಳಗೆ ಒಂದಾಗಿ ಸಂಪಾಜೆ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆದು ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಜನ್ನಮನ್ನಣೆ ಗಳಿಸಿದ ದಿ. ಶ್ರೀ ಬಾಲಚಂದ್ರ ಕಳಗಿಯವರ ಜ್ಞಾಪಕಾರ್ಥವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ಉಚಿತ ರಕ್ತದಾನ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪಾಜೆಯ ಸಮಸ್ತ ಗ್ರಾಮಸ್ಥರು ಮತ್ತು ಚಂದ್ರಣ್ಣನ ಅಭಿಮಾನಿ ಬಂಧುಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿ ಮಾಡಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಜೂ.1 : ಸಂಪಾಜೆಯಲ್ಲಿ ರಕ್ತದಾನ ಶಿಬಿರ"