ಜೂ.14-15 ಪುತ್ತೂರಿನಲ್ಲಿ ಹಲಸು ಹಬ್ಬ

May 7, 2019
12:20 PM

ಪುತ್ತೂರು: ಪುತ್ತೂರಿನಲ್ಲಿ ರಾಜ್ಯ ಮಟ್ಟದ ಹಲಸಿನ ಹಬ್ಬ ಜೂ.14 ಹಾಗೂ 15 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಸಂಬಂಧ ಪೂರ್ವಬಾವಿ ಸಭೆ ಹಾಗೂ ಹಲಸು ಹಬ್ಬ ಕ್ರಿಯಾ ಸಮಿತಿ ರಚನೆ ಮಾಡಲಾಯಿತು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಪೂರ್ವಬಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲಸು ಹಬ್ಬವನ್ನು ವೈಶಿಷ್ಠ್ಯ ಪೂರ್ಣವಾಗಿ ಆಚರಿಸುವಂತೆ ನಿರ್ಧರಿಸಲಾಯಿತು. ಹಲಸಿನ ವಿವಿಧ ಖಾದ್ಯಗಳು , ಹಲಸು ಖಾದ್ಯಗಳ ಪ್ರಾತ್ಯಕ್ಷಿಕೆ, ಹಲಸು ಬಗ್ಗೆ ಗೋಷ್ಠಿಗಳು ಸೇರಿದಂತೆ ಹಲಸು ಬಗ್ಗೆಯೇ ಎರಡು ದಿನ ಚರ್ಚೆ ನಡೆಸಲು ನಿರ್ಧರಿಸಲಾಯಿತು.

ಇದೇ ಸಂದರ್ಭ ಹಲಸು ಕ್ರಿಯಾ ಸಮಿತಿ ರಚನೆ ಮಾಡಲಾಯಿತು. ಹಲಸು ಕ್ರಿಯಾ ಸಮಿತಿ ಅಧ್ಯಕ್ಷರಾಗಿ ಸೇಡಿಯಾಪು ಜನಾರ್ಧನ ಭಟ್ ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುಹಾಸ ಮರಿಕೆ, ಉಪಾಧ್ಯಕ್ಷರಾಗಿ ಗಣಪತಿ ಭಟ್ ಎಕ್ಕಡ್ಕ, ಸಂಚಾಲಕರಾಗಿ ಸತೀಶ್ ಕೊಂಗೋಟು,  ಗೌರವ ಸಲಹೆಗಾರರಾಗಿ ವಿ.ಬಿ ಅರ್ತಿಕಜೆ, ಎವಿ ನಾರಾಯಣ ಮೊದಲಾದವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭ ವಿವಿಧ ಸಮಿತಿ ರಚನೆ ಮಾಡಲಾಯಿತು.

ಸಭೆಯಲ್ಲಿ ಹಲಸು  ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ,  ಪಾಂಡುರಂಗ ಭಟ್, ತಿಮ್ಮಪ್ಪ ಪಾಟಾಳಿ, ಮಹಾದೇವ ಶಾಸ್ತ್ರಿ ಮಣಿಲ, ಮಹೇಶ್ ಪುಚ್ಚಪ್ಪಾಡಿ, ಗೋವಿಂದ ಬೋರ್ಕರ್, ಕವಿತಾ ಅಡೂರು, ಟಿ ರಂಗರಾವ್, ಜಗನ್ನಿವಾಸ ರಾವ್, ಹರಿಕೃಷ್ಣ ಕಾಮತ್,  ಎಪಿ ಸದಾಶಿವ, ಯಮುನಾ , ಶ್ರೀಶಕುಮಾರ್ , ಐಕೆ ಬೊಳುವಾರು, ವೇಣುಗೋಪಾಲ್, ಶಶಿರಾಜ್ ರೈ, ಭಾಸ್ಕರ ಬಾರ್ಯ , ವತ್ಸಲಾ ರಾಜ್ಞಿ ಮೊದಲಾದವರು ಉಪಸ್ಥಿತರಿದ್ದರು.

ಹಲಸು  ಸ್ನೇಹ ಸಂಗಮ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಪ್ರಸ್ತಾವನೆಗೈದು ಸ್ವಾಗತಿಸಿದರು. ಪ್ರಕಾಶ್ ಕೊಡೆಂಕಿರಿ ವಂದಿಸಿದರು. ಸುಹಾಸ್ ಮರಿಕೆ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror