ಜೂ.6 : ಬಾಳಿಲ ಗ್ರಾಮ ಪಂಚಾಯತ್ ಕಟ್ಟಡ ಉದ್ಘಾಟನೆ

June 2, 2019
9:30 AM

ಬಾಳಿಲ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುದಾನದಿಂದ ನಿರ್ಮಾಣಗೊಂಡಿರುವ ಬಾಳಿಲದ ಗ್ರಾಮ ಪಂಚಾಯತ್ ನೂತನ ಕಟ್ಟಡ ಹಾಗೂ ಆರ್.ಜಿ.ಎಸ್.ವೈ ಅನುದಾನದಿಂದ ನಿರ್ಮಾಣವಾದ ನೂತನ ಸಭಾಂಗಣ ಜೂ. 6ರಂದು ಉದ್ಘಾಟನೆ ನಡೆಯಲಿದೆ.

ಗ್ರಾಮ ಪಂಚಾಯತ್ ಕಟ್ಟಡವನ್ನು ನಗರಾಭಿವೃದ್ಧಿ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಉದ್ಘಾಟಿಸಲಿದ್ದಾರೆ. ಮಿನಿ ಸಭಾಂಗಣವನ್ನು ವಿಧಾನ ಪರಿಷತ್ ಸದಸ್ಯ ಹಾಗು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.  ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಸ್.ಅಂಗಾರ ವಹಿಸಲಿದ್ದಾರೆ. ಸಭಾ ಕಾರ್ಯಕ್ರಮವನ್ನು ಸಂಸದ ನಳಿನ್‍ಕುಮಾರ್ ಕಟೀಲ್ ಉದ್ಘಾಟಿಸಲಿದ್ದು , ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಡಾ| ಸೆಲ್ವಮಣಿ ಆರ್, ಜಿಲ್ಲಾ ಪಂಚಾಯತ್ ಜಾಲ್ಸೂರು ಕ್ಷೇತ್ರದ ಸದಸ್ಯೆ ಪುಷ್ಪಾವತಿ ಬಾಳಿಲ, ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಾಲೂಕು ಮಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್. ಮಧುಕುಮಾರ್, ತಾಲೂಕು ಪಂಚಾಯತ್ ಸದಸ್ಯೆ ಜಾಹ್ನವಿ ಕಾಂಚೋಡು, ಪಂಚಾಯತ್‍ರಾಜ್ ಇಂಜಿನಿಯರಿಂಗ್ ಸುಳ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ವಿ.ಹನುಮಂತರಾಯಪ್ಪ, ಕಳಂಜ ಬಾಳಿಲ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಸುಧಾಕರ ರೈ ಎ.ಎಂ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಕಟ್ಟಡದ ನಿರ್ಮಣಕ್ಕೆ ಸ್ಥಳದಾನಗೈದ ಕೆದ್ಲ ನರಸಿಂಹ ಭಟ್ ಅವರಿಗೆ ಗೌರವಾರ್ಪಣೆಗೈಯಲಾಗುವುದೆಂದು ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror