ಜ್ವರ , ಕೆಮ್ಮು, ಉಸಿರಾಟದ ತೊಂದರೆ – ಫೀವರ್ ಕ್ಲಿನಿಕ್ ಸಂಪರ್ಕಿಸಲು ಸೂಚನೆ

April 21, 2020
9:17 PM

ಮಂಗಳೂರು :  ಸಾರ್ವಜನಿಕರು ತಮಗೆ ಜ್ವರ, ಕೆಮ್ಮ, ಉಸಿರಾಟದ ತೊಂದರೆ ಇದ್ದಲ್ಲಿ ನೇರವಾಗಿ ಹತ್ತಿರದ ಫೀವರ್ ಕ್ಲಿನಿಕ್ ಸಂಪರ್ಕಿಸಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement

ಕೋವಿಡ್ ಪರೀಕ್ಷೆಗೊಳಪಡಿಸುವ ಗೃಹ ಅಥವಾ ಸರಕಾರಿ ನಿಗಾವಣೆಯಲ್ಲಿರುವ ಭಯದಿಂದ ಅಥವಾ ಸಂಕೋಚದಿಂದ ತಮ್ಮ ಆರೋಗ್ಯದ ವಿಷಯದ ಬಗ್ಗೆ ಸಾರ್ವಜನಿಕರು ಮುಕ್ತವಾಗಿ ತಮ್ಮ ಆರೋಗ್ಯ ಸಮಸ್ಯೆಗಳ ಮಾಹಿತಿಯನ್ನು  ಅಧಿಕಾರಿಗಳೊಂದಿಗೆ  ಹಂಚಿಕೊಳ್ಳದಿರುವುದು ತೀರಾ ವಿಷಾದನೀಯ.

ಖಾಸಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳಲ್ಲಿಯೂ ಸಹ ಜ್ವರ, ಉಸಿರಾಟದ ತೊಂದರೆ ಇರುವಂತಹ ರೋಗಿಗಳ ಬಗ್ಗೆ ಮಾಹಿತಿಯನ್ನು ಕಡ್ಡಾಯವಾಗಿ ನೀಡಲು ಈಗಾಗಲೇ ಆದೇಶಿಸಲಾಗಿದೆ. ಅದರಂತೆ ಎಲ್ಲಾ ಖಾಸಗಿ ವೈದ್ಯಾಧಿಕಾರಿಗಳು ಸಹ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೊಳಪಟ್ಟಿರುವಂತಹ ಯಾವೊಬ್ಬ ವ್ಯಕ್ತಿಯ ವೈಯಕ್ತಿಕ ಮಾಹಿತಿಯನ್ನು ಬಹಿರಂಗಪಡಿಸಿರುವುದಿಲ್ಲ. ಸೋಂಕಿತ ಕೋವಿಡ್ ರೋಗಿಗಳ ಸಂಖ್ಯೆಗಳ ಮಾಹಿತಿಯನ್ನು ಮಾತ್ರ ಸಾರ್ವಜನಿಕರ ಮಾಹಿತಿಗಾಗಿ ನೀಡಲಾಗುತ್ತಿದೆ. ಇದು ಸಹ ಸಾರ್ವಜನಿಕರು ವಹಿಸಬೇಕಾದ ಮುಂಜಾಗರೂಕತಾ ಕ್ರಮಕ್ಕಾಗಿ ನೀಡುವ ಮಾಹಿತಿ ಆಗಿರುತ್ತದೆ.  ಆದ್ದರಿಂದ ಸಾರ್ವಜನಿಕರು ಯಾವುದೇ ಸಂಕೋಚಪಡದೆ, ತಮ್ಮ ಕುಟುಂಬದ ಹಾಗೂ ಇತರರ ರಕ್ಷಣೆಗಾಗಿ ಜನವರಿ ತಿಂಗಳಿನಿಂದ ವಿದೇಶದಿಂದ ಜಿಲ್ಲೆಗೆ ಆಗಮಿಸಿರುವವರ ಮಾಹಿತಿಯನ್ನು ನೀಡುವುದು ಸಾರ್ವಜನಿಕರ ಆದ್ಯ ಕರ್ತವ್ಯವಾಗಿರುತ್ತದೆ.
ತಮ್ಮ ಕುಟುಂಬದಲ್ಲಿ ಯಾರಿಗಾದರೂ ಜ್ವರ, ಕೆಮ್ಮು, ಉಸಿರಾಟದ ತೊಂದರೆ ಇದ್ದಲ್ಲಿ ಕೂಡಲೇ ಸರಕಾರಿ ವೈದ್ಯಾಧಿಕಾರಿಗಳ ಗಮನಕ್ಕೆ ತರಲು ಅಥವಾ 1077 ಸಂಖ್ಯೆಗೆ ಕಾಲ್ ಮಾಡಿ ಮಾಹಿತಿ ನೀಡಲು ತಿಳಿಸಲಾಗಿದೆ.
ಈ ರೀತಿ ತ್ವರಿತವಾಗಿ ಮಾಹಿತಿಯನ್ನು ನೀಡುವುದರಿಂದ ಸಕಾಲದಲ್ಲಿ ಚಿಕಿತ್ಸೆ ದೊರೆತು ಗುಣಪಡಿಸಬಹುದಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ
June 17, 2025
11:58 AM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?
June 17, 2025
11:24 AM
by: The Rural Mirror ಸುದ್ದಿಜಾಲ
ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |
June 17, 2025
6:53 AM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group