ಡಿ.ವಿ.ಎಸ್‍ಗೆ ಮತ್ತೆ ಒಲಿದ ಸಚಿವ ಸ್ಥಾನ : ಹುಟ್ಟೂರಲ್ಲಿ ಸಂಭ್ರಮ

Advertisement

ಸುಳ್ಯ:  ನರೇಂದ್ರ ಮೋದಿ ನೇತೃತ್ವದ ಎರಡನೇ ಎನ್.ಡಿ.ಎ ಸರಕಾರದಲ್ಲಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಡಿ.ವಿ.ಸದಾನಂದ ಗೌಡ ಅಧಿಕಾರ ವಹಿಸಿರುವುದರಿಂದ ಡಿವಿ ಹುಟ್ಟೂರಾದ ಸುಳ್ಯದಲ್ಲಿ ಸಂಭ್ರಮದ ವಾತಾವರಣ ಉಂಟಾಗಿದೆ.

Advertisement

ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಸಂಭ್ರಮ ಆಚರಿಸಿದರು. ಟೀಂ ಮೋದಿ ಸಚಿವ ಸಂಪುಟದಲ್ಲಿ ಎರಡನೇ ಬಾರಿಯೂ ಕ್ಯಾಬಿನೆಟ್ ಸಚಿವ ಪದವಿ ಪಡೆದು ಅಧಿಕಾರ ವಹಿಸಿದ ಸಂದರ್ಭದಲ್ಲಿ ಸದಾನಂದ ಗೌಡರ ತರವಾಡು ಮನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದಲ್ಲಿಯೂ ಸಂಭ್ರಮದ ಅಲೆಯೆಬ್ಬಿಸಿತು. ಪ್ರಥಮ ಮೋದಿ ಸರಕಾರಲ್ಲಿ ಐದು ವರ್ಷಗಳ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಸದಾನಂದ ಗೌಡರು ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ, 2009ರಲ್ಲಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಅವರು 2011ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು. 2014 ಮತ್ತು 2019ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಡಿ.ವಿ.ಎಸ್ ಎರಡನೇ ಬಾರಿ ಕೇಂದ್ರ ಸಚಿವರಾಗಿದ್ದಾರೆ.

Advertisement
Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಡಿ.ವಿ.ಎಸ್‍ಗೆ ಮತ್ತೆ ಒಲಿದ ಸಚಿವ ಸ್ಥಾನ : ಹುಟ್ಟೂರಲ್ಲಿ ಸಂಭ್ರಮ"

Leave a comment

Your email address will not be published.


*