ಡಿ.17ರಂದು ಕರ್ನಾಟಕ ರೈತ ಸಂಘ ಹಾಗು ಹಸಿರು ಸೇನೆ ಪ್ರತಿಭಟನೆ

December 6, 2019
6:43 PM

ಸುಳ್ಯ : ಕರ್ನಾಟಕ ರೈತ ಸಂಘ ಹಾಗು ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲೆಯ ರೈತರ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮತ್ತು ಹಕ್ಕೊತ್ತಾಯ ಸಭೆ ಡಿ.17 ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಲಿದೆ. ಸುಳ್ಯ ತಾಲೂಕಿನಿಂದಲೂ ನೂರಾರು ಮಂದಿ ರೈತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರೈತ ಸಂಘ ಹಾಗು ಹಸಿರು ಸೇನೆಯ ಸುಳ್ಯ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ಗೌಡ ನೆಡ್ಚಿಲು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರ ಘೋಷಣೆ ಮಾಡಿದ ಸಾಲ ಮನ್ನಾ ಯೋಜನೆಯಲ್ಲಿ ಅರ್ಹ ಫಲಾನುಭವಿ ರೈತರ ಖಾತೆಗೆ ತಕ್ಷಣ ಹಣ ಜಮೆ ಆಗಬೇಕು. 2017-18ನೇ ಸಾಲಿನ ಕೊಳೆ ರೋಗ ಪರಿಹಾರ ಜಮೆ ಮಾಡಬೇಕು. 2018-19 ನೇ ಸಾಲಿನಲ್ಲಿ ಕೊಳೆ ರೋಗದಿಂದ ಶೇ.40 ರಷ್ಟು ಅಡಿಕೆ ನಾಶವಾಗಿದೆ. ಇದಕ್ಕೆ ಪರಿಹಾರ ನೀಡಲು ತಕ್ಷಣ ಅರ್ಜಿ ಸ್ವೀಕರಿಸಬೇಕು, ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ತಕ್ಷಣ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಬೇಕು. ಅಡಿಕೆ ಎಲೆ ಹಳದಿ ಬಾಧಿತ ಪ್ರದೇಶದ ರೈತರಿಗೆ ಪರ್ಯಾಯ ಬೆಳೆ ಬೆಳೆಸಲು ವಿಶೇಷ ಪ್ಯಾಕೇಜ್ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಮಂಕಿ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಿ ಅನುಷ್ಠಾನ ಮಾಡಬೇಕು. ಅತಿವೃಷ್ಠಿ, ಅಕಾಲಿಕ ಮಳೆಯಿಂದ ಹಾನಿಗೊಳಗಾದ ಮನೆ, ಕಟ್ಟಡಗಳಿಗೆ, ಕೃಷಿ ನಾಶಕ್ಕೆ ವೈಜ್ಞಾನಿಕ ಪರಿಹಾರ ನೀಡಬೇಕು. 94 ಸಿ, 94ಸಿಸಿ ಅಕ್ರಮ ಸಕ್ರಮ ಅರ್ಜಿಗಳ ವಿಲೇವಾರಿಗೆ ಸಮಿತಿ ರಚನೆ ಮಾಡಿ ಇತ್ಯರ್ಥ ಮಾಡಬೇಕು ಮತ್ತು ಇತ್ಯರ್ಥಗೊಂಡ ಅರ್ಜಿಗಳಿಗೆ ತಕ್ಷಣ ಹಕ್ಕು ಪತ್ರ ಮತ್ತು ಪಹಣಿ ನೀಡಬೇಕು. ಋಣ ಮುಕ್ತ ಕಾಯಿದೆ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಋಣ ಮುಕ್ತಗೊಳಿಸಲು ಕ್ರಮ ಕೈಗೊಳ್ಳಬೇಕು. ಉದ್ಯೋಗ ಖಾತರಿ ಯೋಜನೆಗೆ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ರಬ್ಬರ್ ಬೆಲೆ ಕುಸಿತದಿಂದ ಕಂಗಾಲಾಗಿರುವ ರಬ್ಬರ್ ಬೆಳೆಗಾರರಿಗೆ ಕೇರಳ ಮಾದರಿಯಲ್ಲಿ ಬೆಂಬಲ ಬೆಲೆ ಘೋಷಿಸಬೇಕು. ಭತ್ತದ ಬೆಳೆಗೆ ಪ್ರೋತ್ಸಾಹ ನೀಡಬೇಕು, ನವಿಲು ಪಾರ್ಕ್ ರಚಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿರಿಸಿ ಪ್ರತಿಭಟನೆ ನಡೆಸಲಾಗುತಿದೆ ಎಂದು ಅವರು ಹೇಳಿದರು.

ಜಿಲ್ಲಾ ಉಪಾಧ್ಯಕ್ಷ ದಿವಾಕರ ಪೈ, ತಾಲೂಕು ಕೋಶಾಧಿಕಾರಿ ದೇವಪ್ಪ ಗೌಡ ಕುಂದಲ್ಪಾಡಿ, ಸಂಚಾಲಕ ಸೆಬಾಸ್ಟಿಯನ್ ಮಡಪ್ಪಾಡಿ, ತೊಡಿಕಾನ ಅರಂತೋಡು ವಲಯ ಘಟಕದ ಅಧ್ಯಕ್ಷ ತೀರ್ಥರಾಮ ಗೌಡ ಉಳುವಾರು, ಐವರ್ನಾಡು ಘಟಕದ ಕಾರ್ಯದರ್ಶಿ ಜಯಪ್ರಕಾಶ್ ನೆಕ್ರಪ್ಪಾಡಿ, ಮೋಹನ್ ಅಡ್ತಲೆ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ
May 20, 2026
2:50 PM
by: ಸಾಯಿಶೇಖರ್ ಕರಿಕಳ
ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ
May 20, 2026
7:18 AM
by: ಮಿರರ್‌ ಡೆಸ್ಕ್
ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ
May 20, 2026
7:15 AM
by: ದ ರೂರಲ್ ಮಿರರ್.ಕಾಂ
ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!
May 19, 2026
11:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror