ಡಿ.15 ರಂದು ಪಂಜದಲ್ಲಿ ನಡೆಯುವ ಭಜನೋತ್ಸವದ ಪೂರ್ವಭಾವಿ ಸಭೆ

November 11, 2019
9:08 AM

ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪ್ರವರ್ತಿತ ಸುಳ್ಯ ತಾಲೂಕು ಭಜನಾ ಪರಿಷತ್ ಆಶ್ರಯದಲ್ಲಿ ಡಿ.15 ರಂದು ನಡೆಯಲಿರುವ ಭಜನೋತ್ಸವದ ಪೂರ್ವಭಾವಿ ಸಭೆಯು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.

ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಗೌರವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಸುರೇಶ್ ಕಣೆಮರಡ್ಕ, ಮೋನಪ್ಪ ಗೌಡ ಬೊಳ್ಳಾಜೆ, ವಿಶ್ವನಾಥ ಸಂಪ,ಮೇಲ್ವಿಚಾರಕ ವಸಂತ್ ಉಪಸ್ಥಿತರಿದ್ದರು.

ಡಿ.15 ರಂದು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಟ್ಟು ಸೇರಿಸಿ ಒಂದು ದಿನದ ಕಾರ್ಯಕ್ರಮ ನಡೆಸುವುದಾಗಿ ತೀರ್ಮಾನಿಸಲಾಯಿತು. ಭಜನಾ ತರಬೇತಿ ಮತ್ತು ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಭಜನೋತ್ಸವ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ವಿಶ್ವನಾಥ ಸಂಪ, ಕಾರ್ಯದರ್ಶಿ ವಸಂತ್, ಉಪಾಧ್ಯಕ್ಷ ರಾಗಿ ಶಿವಾನಂದ ಕಿಣಿ ಸುಬ್ರಹ್ಮಣ್ಯ, ವಸಂತ್ ಹುದೇರಿ, ಕೋಶಾಧಿಕಾರಿ ರಾಜೇಶ್ ಕುದ್ವ, ಜತೆ ಕಾರ್ಯದರ್ಶಿ ಮೋನಪ್ಪ ಗೌಡ ಬೊಳ್ಳಾಜೆ ಇವರುಗಳನ್ನು ಅಧ್ಯಕ್ಷರ ಸಲಹೆಯಂತೆ ಆಯ್ಕೆ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror