ಡಿ.28-29: ಮಣಿಕ್ಕಾರ ಪಾಲ್ತಾಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ, ದೈವಗಳ ನೇಮೋತ್ಸವ

December 23, 2019
7:23 PM

ಸವಣೂರು : ಕೊಳ್ತಿಗೆ ಗ್ರಾಮದ ಮಣಿಕ್ಕಾರ ಪಾಲ್ತಾಡು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ದೈವಗಳ ನೇಮೋತ್ಸವವು ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದದಲ್ಲಿ ಡಿ.28 ಮತ್ತು ಡಿ.29 ರಂದು ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಡಿ.28ರಂದು ಬೆಳಿಗ್ಗೆ 8.30ಕ್ಕೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ಪಂಚವಿಂಶಮಿ ಕಲಶ ಪೂಜೆ, ನಾಗ ಸಾನಿದ್ಯದಲ್ಲಿ ತಂಬಿಲ ಸೇವೆ, ದೈವದ ಸಾನಿದ್ಯದಲ್ಲಿ ತಂಬಿಲ ಸೇವೆ, ಮದ್ಯಾಹ್ನ ಶ್ರೀದೇವರಿಗೆ ಸಾನಿಧ್ಯ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ರಕ್ತೇಶ್ವರಿ ದೈವದ ಭಂಡಾರ ತೆಗೆಯುವುದು, ರಾತ್ರಿ 7.30ಕ್ಕೆ ಶ್ರೀ ವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ಪ್ರಸಾದ ವಿತರಣೆ, 8.30ಕ್ಕೆ ರಕ್ತೇಶ್ವರಿ ದೈವದ ನೇಮ ನಡೆಯಲಿದೆ.

ಡಿ.29ರಂದು ಬೆಳಿಗ್ಗೆ 7 ಗಂಟೆಗೆ ಉಳ್ಳಾಕುಲು ದೈವದ ನೇಮ, ನಂತರ ಮಹಿಷಂತಾಯ ದೈವದ ನೇಮ, ಮದ್ಯಾಹ್ನ ಹುಲಿಭೂತ ದೈವದ ನೇಮ, ಸಂಜೆ ಪಂಜುರ್ಲಿ ದೈವದ ನೇಮ, ಗುಳಿಗ ದೈವದ ನೇಮ ನಡೆಯಲಿದೆ ಎಂದು ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಎಂ.ಗೋಪಾಲಕೃಷ್ಣ ಶ್ಯಾನುಬೋಗ್ ,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಾಲ್ತಾಡು ನಾರಾಯಣ ರೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror