ತಪ್ಪಿದ ಸಚಿವ ಸ್ಥಾನ.‌….ನಾಳೆಯ ಸಭೆಯಲ್ಲಿ ಹೊರಬರಲಿದೆ ಮಹತ್ವದ ನಿರ್ಧಾರಕ್ಕೆ ಬಿಜೆಪಿ ಪದಾಧಿಕಾರಿಗಳು, ಜನಪ್ರತಿನಿಧಿಗಳು..?

August 20, 2019
9:49 PM

ಸುಳ್ಯ: ನಿರಂತರ ಆರು ಬಾರಿ ಶಾಸಕರಾಗಿ ಆಯ್ಕೆಯಾದರೂ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನ ತಪ್ಪಿಸರುವುದರ ವಿರುದ್ಧ ವಿವಿಧ ಭಾಗಗಳಿಂದ ತೀವ್ರ ಅಸಮಾಧಾನ, ಆಕ್ರೋಶ ವ್ಯಕ್ತವಾಗಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾತ್ರವಲ್ಲದೆ ಜೆಡಿಎಸ್, ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಸೇರಿದಂತೆ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ವಿಚಾರದಲ್ಲಿ ಸುಳ್ಯದ ಜನತೆ ಒಕ್ಕೊರಲಿಂದ ಬೇಡಿಕೆ ಇಟ್ಟಿರುವುದಲ್ಲದೆ ಪಕ್ಷಗಳು ಕೂಡ ಬಲು ಅಪರೂಪದ ರಾಜಕೀಯ ಐಕ್ಯತೆಯನ್ನು ತೋರ್ಪಡಿಸಿದೆ. ಅಂಗಾರ ಸಚಿವರಾಗುವವರೆಗೆ ಪಕ್ಷದ ಎಲ್ಲಾ ಚಟುವಟಿಕೆಗಳನ್ನೂ ಸ್ಥಗಿತ ಮಾಡುವುದಾಗಿ ಬಿಜೆಪಿ ಘೋಷಿಸಿದರೆ, ರಾಜಕೀಯ ಭಿನ್ನಾಭಿಪ್ರಾಯ ಇದ್ದರೂ ಈ ವಿಚಾರದಲ್ಲಿ ಪಕ್ಷದ ಧ್ವಜವನ್ನು ಮನೆಯಲ್ಲಿಟ್ಟು ಎಲ್ಲರ ಜೊತೆ ಸೇರಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಜೆಡಿಎಸ್ ಘೋಷಿಸಿದೆ. ಸಚಿವ ಸ್ಥಾನ ನೀಡದ ಬಗ್ಗೆ ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ ಮುಖಂಡರು ಕಟುವಾಗಿ ಟೀಕಿಸಿದ್ದಾರೆ. ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕೂಡ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾಳೆ ನಿರ್ಣಾಯಕ ತೀರ್ಮಾನ: ಬುಧವಾರ ಬೆಳಿಗ್ಗೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.
ಬಿಜೆಪಿಯ ಎಲ್ಲಾ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಾಮೂಹಿಕವಾಗಿ ರಾಜಿನಾಮೆ ಘೋಷಿಸುವುದು ಸೇರಿದಂತೆ ಕಠಿಣ ನಿರ್ಧಾರ ಕೈಗೊಳ್ಳುವ ಸೂಚನೆಯನ್ನು ಬಿಜೆಪಿ ನೀಡಿದೆ. ಅಲ್ಲದೆ ಸುಳ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿದೆ.

ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ , ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸುವಂತೆ ಮಂಡಲ ಸಮಿತಿ ಸೂಚನೆ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror