ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ ಆಯ್ಕೆ

November 2, 2019
10:53 PM

ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ ಆಯ್ಕೆಯಾಗಿದ್ದಾರೆ. ನ 2 ರಂದು ಪತ್ರಿಕಾ ಭವನದಲ್ಲಿ ಮಹಾಸಭೆ ನಡೆದು ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

Advertisement

ನಿಕಟ ಪೂರ್ವ ಅಧ್ಯಕ್ಷ ಸುಧಾಕರ್ ಸುವರ್ಣ ತಿಂಗಳಾಡಿ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾಧಿಕಾರಿಯಾಗಿ ಬಿ ಟಿ ರಂಜನ್, ಉಪಚುನಾವಣಾಧಿಕಾರಿಗಳಾಗಿ ಮೇಘಾ ಪಾಲೆತ್ತಡಿ ಮತ್ತು ಬಾಲಕೃಷ್ಣ ಕೊಯಿಲ ಕಾರ್ಯನಿರ್ವಹಿಸಿದ್ದರು. ಚುನಾವಣಾ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆದು ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿಯ ಪುತ್ತೂರು ವರದಿಗಾರ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ಉದಯವಾಣಿಯ ಕಡಬ ವರದಿಗಾರ ಎನ್‌.ಕೆ.ನಾಗರಾಜ್, ಉಪಾಧ್ಯಕ್ಷರಾಗಿ ಉದಯವಾಣಿ ಉಪ್ಪಿನಂಗಡಿ ವರದಿಗಾರ ಸರ್ವೇಶ್ ಕುಮಾರ್ ಮತ್ತು ವಿಜಯ ಕರ್ನಾಟಕ ಪುತ್ತೂರು ಗ್ರಾಮಾಂತರ ವರದಿಗಾರ ಸಿದ್ದಿಕ್ ಕುಂಬ್ರ, ಕೋಶಾಧಿಕಾರಿಯಾಗಿ ಕೃಷ್ಣಪ್ರಸಾದ್ ಬಲ್ನಾಡು, ಜೊತೆಕಾರ್ಯದರ್ಶಿಯಾಗಿ ಜಯಕಿರಣ ಉಪ್ಪಿನಂಗಡಿ ವರದಿಗಾರ ನಜೀರ್ ಕೊಯಿಲ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಮಾತ್ರ ಚುನಾವಣೆ ನಡೆದಿದ್ದು ಉಳಿದ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ಆಯ್ಕೆಯಾದರು.

ನಾಗರಾಜ್ ಕಡಬ

ಶ್ರವಣ್ ಕುಮಾರ್ ನಾಳ,ಶಶಿಧರ ರೈ ಕುತ್ಯಾಳ, ಕುಮಾರ್ ಕಲ್ಲಾರೆ, ಸುಧಾಕರ ಪಡೀಲ್, ಹರೀಶ್ ಕೃಷ್ಣ ಸ್ಟುಡಿಯೊ, ಉಮಾಶಂಕರ್ ಪಾಂಗ್ಲಾಯಿ, ರಾಜೇಶ್ ಪಟ್ಟೆ, ರಾಮಚಂದ್ರ ಬರೆಪ್ಪಾಡಿ, ಲೋಕೇಶ್ ಬನ್ನೂರು,  ಅನೀಶ್ ಕುಮಾರ್ ಮರೀಲ್,  ಪ್ರವೀಣ್ ಬೊಳುವಾರು, ಕಿರಣ್ ಪ್ರಸಾದ್ ಕುಂಡಡ್ಕ, ಸಿಶೇ ಕಜೆಮಾರ್, ಕರುಣಾಕರ್ ರೈ ಸಿ ಹೆಚ್ ,ಶೇಖ್ ಜೈನುದ್ದೀನ್, ದೀಪಕ್ ಉಬಾರ್, ಸಂತೋಷ್ ಕುಮಾರ್ ಶಾಂತಿನಗರ, ನಾರಾಯಣ ನಾಯ್ಕ್ ಅಮ್ಮುಂಜ, ಉದಯ ಕುಮಾರ್ ಯು ಎಲ್, ಹರೀಶ್ ಬಾರಿಂಜ, ಯತೀಶ್ ಉಪ್ಪಳಿಗೆ, ಉಮಾಪ್ರಸಾದ್ ರೈ ನಡುಬೈಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಿರಂತರತೆಗೆ ಇರುವ ಶಕ್ತಿ ಅಪಾರ: ರಾಘವೇಶ್ವರ ಶ್ರೀ
July 18, 2025
10:31 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಸುಚನ್ಯ
July 18, 2025
10:15 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪೃಥ್ವಿ ಜಿ ಎಂ
July 18, 2025
10:06 PM
by: ದ ರೂರಲ್ ಮಿರರ್.ಕಾಂ
ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ
July 18, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group