ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನಿಂದ ನೆರವು

July 31, 2019
5:00 PM

ಸುಳ್ಯ:  ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 26ನೇ ತುರ್ತು ಸೇವಾ ಯೋಜನೆಯ ಸೇವಾ ಹಸ್ತಾಂತರ  ನಡೆಯಿತು.

ಸುಳ್ಯ ದೊಡ್ಡತೋಟ ಗಬಲಡ್ಕ ಬಾಲಕೃಷ್ಣ ಭಂಡಾರಿಯವರ ಕಿರಿಯ ಮಗ ಪುನೀತ್ ಅವರು  ಶಾಲಾ ಮೈದಾನದಲ್ಲಿ ಗೆಳೆಯರೊಂದಿಗೆ ಕ್ರಿಕೆಟ್ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಬಿದ್ದು ಕುತ್ತಿಗೆ ಮತ್ತು ಬೆನ್ನು ಹುರಿಯ ನಡುವಿನ ನರ ಸಡಿಲಗೊಂಡು ಉಸಿರಾಟವಾಡಲು ತೀವ್ರ ಸಮಸ್ಯೆಯಾಗಿ ತಕ್ಷಣ ಮಂಗಳೂರಿನ ಫಾಧರ್ ಮುಲ್ಲರ್ ಆಸ್ವತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದ ವೈದ್ಯರು ಬದುಕುವುದೇ ಕಷ್ಟ ಎಂದು ತಿಳಿಸಿದರು. ಆದರೆ ಸತತ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಚಿಕಿತ್ಸೆಯ ದಿನದ ವೆಚ್ಚ 15,000 ರೂಪಾಯಿ ತಗಲುತ್ತಿದ್ದು ಪುನೀತ್ ಅವರ ಅಣ್ಣನಿಗೆ ದೊಡ್ಡತೋಟದಲ್ಲಿ ಸೆಲೂನ್ ಅಂಗಡಿ ಇದೆ ಅಷ್ಟೇ ಬೇರೇನೂ ಆದಾಯ ಇಲ್ಲದ ಈ ಕುಟುಂಬ ಕಂಗಾಲಾಗಿತ್ತು. ಇವರ ಕಷ್ಟವನ್ನು ಅರಿತ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ರೂ.10,000 ಚೆಕ್ ಅನ್ನು ಇಂದು ಪುನೀತ್ ಅವರ ಮನೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಮಯದಲ್ಲಿ ಪುನೀತ್ ನ ಅಣ್ಣ ವಿನಯ್ ಕುಮಾರ್ ಮತ್ತು ಟ್ರಸ್ಟ್ ಸೇವಾ ಬಾಂಧವರು ಉಪಸ್ಥಿತರಿದ್ದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆ ನಷ್ಟವಾಗಿದೆ | ಬೆಳೆ ವಿಮೆ ಪರಿಹಾರ ಕಡಿಮೆಯಾಗಿದೆ.. ಮುಂದೇನು ಮಾಡಬಹುದು..?
December 9, 2025
8:04 AM
by: ಮಹೇಶ್ ಪುಚ್ಚಪ್ಪಾಡಿ
ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ
December 8, 2025
8:57 PM
by: ರೂರಲ್‌ ಮಿರರ್ ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳೆ ವಿಮೆ ಕತೆ ಏನು..? | ಬೆಳೆ ವಿಮೆ ಪಾವತಿಯಾಗದೇ ಇದ್ದರೆ ಸರ್ಕಾರದಿಂದ ಪರಿಹಾರ ಅಗತ್ಯವಿದೆ
December 7, 2025
8:20 PM
by: ಮಹೇಶ್ ಪುಚ್ಚಪ್ಪಾಡಿ
ಉತ್ತಮ ಆಹಾರದೊಂದಿಗೆ ಕಣ್ಣಿನ ರಕ್ಷಣೆ ಮಾಡಿ
December 7, 2025
3:31 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror