ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಆಗ್ರಹ

December 3, 2019
9:54 AM

ಸುಳ್ಯ: ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕಾಸರಗೋಡು ಸಂಸದರಾದ ರಾಜ್ ಮೋಹನ್ ಉಣ್ಣಿತ್ತಾನ್ ಲೋಕಸಭೆಯಲ್ಲಿ ಒತ್ತಾಯಿಸಿದರು.

ಕರ್ನಾಟಕದ ಎರಡು ಕರಾವಳಿ ಜಿಲ್ಲೆಗಳು ಮತ್ತು ಕಾಸರಗೋಡು ಜಿಲ್ಲೆಯ ಬಹುತೇಕರು ದ್ರಾವಿಡ ಭಾಷೆಗಳಲ್ಲೊಂದಾದ ತುಳು ಭಾಷಿಕರಾಗಿದ್ದಾರೆ. 2011 ರ ಖಾನೇಶುಮಾರಿ ವರದಿ ಪ್ರಕಾರ ಸುಮಾರು 18,46,427 ಜನರು ತುಳು ಭಾಷಿಕರಾಗಿದ್ದಾರೆ. ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಂಡಿರುವ ಮಣಿಪುರಿ(17,61,079), ಸಂಸ್ಕೃತ (24,821) ಮುಂತಾದ ಭಾಷೆಗಳಿಗೆ ಹೋಲಿಸಿದರೆ ತುಳು ಭಾಷಿಕರ ಸಂಖ್ಯೆ ಅಧಿಕವಾಗಿದೆ ಎಂದು ಅವರು ಅಂಕಿ ಅಂಶ ಸಹಿತ ವಿವರಿಸಿದರು.

ತುಳು ಭಾಷೆಯನ್ನು ಎಂಟನೇ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಿದಲ್ಲಿ ಸಾಹಿತ್ಯ ಅಕಾಡೆಮಿಯಿಂದ ಅಂಗೀಕಾರ ಲಭಿಸುವುದು ಮಾತ್ರವಲ್ಲದೆ, ಇತರ ಭಾಷೆಗಳಿಗೆ ತುಳು ಸಾಹಿತ್ಯ ಕೃತಿಗಳನ್ನು ಇತರ ಭಾಷೆಗಳಿಗೆ ಅನುವಾದ ಮಾಡಲೂ ಸಾಧ್ಯವಾಗಲಿದೆ. ಸಂಸತ್ ಸದಸ್ಯರು ಮತ್ತು ಶಾಸಕರಿಗೆ ಪಾರ್ಲಿಮೆಂಟ್ ಮತ್ತು ವಿಧಾನಸಭೆಗಳಲ್ಲಿ ತುಳುವಿನಲ್ಲಿ ಪ್ರಶ್ನೆಗಳನ್ನು ಕೇಳಲು ಮತ್ತು ನಾಗರಿಕ ಸೇವಾ ಪರೀಕ್ಷೆಗಳೂ ಸೇರಿದಂತೆ ಅಖಿಲ ಭಾರತ ಮಟ್ಟದ ಪರೀಕ್ಷೆಗಳನ್ನು ತುಳುವಿನಲ್ಲಿ ಬರೆಯಲು ಸಾಧ್ಯವಾಗಲಿದೆಯೆಂದು ಅವರು ವಿವರಿಸಿದರು.

ಕೇರಳ ಹಾಗೂ ಕರ್ನಾಟಕದ ತುಳು ಭಾಷಿಕರ ಹಲವು ದಶಕಗಳ ಬೇಡಿಕೆಯನ್ನು ಸಂಸದ ಶ್ರೀ ಉಣ್ಣಿತ್ತಾನ್ ಲೋಕಸಭೆಯಲ್ಲಿ ಮಂಡಿಸಿದರು. 2018 ರಲ್ಲಿ ಯುನೆಸ್ಕೋ ಚೈನಾದ ಚಾಂಗ್ಸಾದಲ್ಲಿ ಆಯೋಜಿಸಿದ್ದ ಯುಯುಲು ಘೋಷಣೆಯ ಕೆಲವು ಆಯ್ದ ಭಾಗಗಳನ್ನು ಓದಿ ಸಂಸದರು ಶೂನ್ಯ ವೇಳೆಯಲ್ಲಿ ತುಳು ಭಾಷೆಗೆ ಅಂಗೀಕಾರಕ್ಕಾಗಿ ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror