ತ್ಯಾಜ್ಯ ಎಸೆತಕ್ಕೆ 1000 ರೂಪಾಯಿ ದಂಡ : ಸುಳ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಮುನ್ನ ಎಚ್ಚರ

July 5, 2019
4:40 PM

ಸುಳ್ಯ: ತ್ಯಾಜ್ಯ ಎಸೆತದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯದಲ್ಲಿ ಮೊದಲ ಬಾರಿಗೆ 1000 ರೂಪಾಯಿ ದಂಡ ವಿಧಿಸಲಾಗಿದೆ. ಸಿಸಿ ಕ್ಯಾಮಾರದ ಮೂಲಕ ಸೆರೆಯಾದ ವ್ಯಕ್ತಿ ಈಗ ತ್ಯಾಜ್ಯ ಎಸೆತಕ್ಕೆ ದಂಡ ತೆರಬೇಕಾಗಿದೆ.  ಎಚ್ಚರ,  ಇನ್ನು ಸುಳ್ಯದಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯ, ಕಸ  ಎಸೆದರೆ ದಂಡ ತೆರಬೇಕಾಗುತ್ತದೆ. ನಿಗದಿತ ಸ್ಥಳದಲ್ಲೇ ತ್ಯಾಜ್ಯ ಎಸೆಯಿರಿ.

ಅಂಬಟೆಡ್ಕ ಪ್ರದೇಶದಲ್ಲಿ ತ್ಯಾಜ್ಯ ಎಸೆಯುವ ಪ್ರಕರಣ ಹೆಚ್ಚಾಗಿತ್ತು. ಸ್ವಚ್ಛ ಮಾಡಿದರೂ ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದರು. ಇತ್ತೀಚೆಗಷ್ಟೇ ನಗರ ಪಂಚಾಯತ್ ಸದಸ್ಯರು ಮುಜಿವರ್ಜಿ ವಹಿಸಿ ಸ್ವಚ್ಛತೆ ಮಾಡಿದ್ದರು. ಅದಾದ ಮರುದಿನವೇ ಅದೇ ಪ್ರದೇಶದಲ್ಲಿ ತ್ಯಾಜ್ಯ ಎಸೆದಿದ್ದರು. ಹೀಗಾಗಿ ಸಿಸಿ ಕ್ಯಾಮಾರ ಅಳವಡಿಕೆ ಮಾಡಿ ತ್ಯಾಜ್ಯ ಎಸೆಯುವವರನ್ನು ಪತ್ತೆ ಮಾಡಲು ನಗರ ಪಂಚಾಯತ್ ಆಡಳಿತ ಹಾಗೂ ಸದಸ್ಯರು ನಿರ್ಧಾರ ಮಾಡಿದ್ದರು.

ಇದೀಗ ಕಾಲೇಜು ವಿದ್ಯಾರ್ಥಿಯೋರ್ವ ತ್ಯಾಜ್ಯ ಎಸೆಯುತ್ತಿರುವುದು  ಸಿಸಿ ಕ್ಯಾಮಾರದಲ್ಲಿ ಪತ್ತೆಯಾಗಿದೆ. ಬಳಿಕ ವಿದ್ಯಾರ್ಥಿ ವಾಸ್ತವ್ಯ ಇರುವ ಮನೆಯವರಿಗೆ ತಿಳಿಸಿ ತ್ಯಾಜ್ಯ ಎಸೆತಕ್ಕೆ  1000 ದಂಡ ತೆರಬೇಕಾಗಿ ಬಂದಿದೆ.  ಸುಳ್ಯದಲ್ಲಿ ತ್ಯಾಜ್ಯ  ಕಸ ಎಸೆತಕ್ಕೆ ಇದು ಮೊದಲ ದಂಡವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ
March 7, 2026
3:02 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ
March 7, 2026
2:12 PM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror