ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಮಳೆ ಆತಂಕ

September 7, 2019
11:38 AM

ಮಡಿಕೇರಿ :ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಮತ್ತೆ ಪ್ರವಾಹದ ಆತಂಕ ಸೃಷ್ಟಿಸಿದ್ದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಮಳೆ ಶಾಂತವಾಗಿದ್ದರೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ದಕ್ಷಿಣ ಕೊಡಗಿನ ಭಾಗಗಳಲ್ಲಿ ಭಾರೀ ಮಳೆಯಿಂದ ಲಕ್ಷ್ಮಣತೀರ್ಥ ಮತ್ತು ಕೇರಳದತ್ತ ಸಾಗುವ ಬರಪ್ಪೊಳೆ ಉಕ್ಕಿ ಹರಿಯುತ್ತಿದ್ದು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಡಿಕೇರಿಯಲ್ಲಿ ಶುಕ್ರವಾರ ತಿಳಿ ಬಿಸಿಲಿನ ವಾತಾವರಣ ಕಂಡು ಬಂದಿತ್ತಾದರೂ ಸೋಮವಾರಪೇಟೆಯಲ್ಲಿ ಬಿಸಿಲು ಕಾಣದೆ ವಾರವೇ ಕಳೆದಿದೆ.

ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದೊಂದು ದಿನದ ಅವಧಿಯಲ್ಲಿ 4 ಇಂಚು ಮಳೆ ದಾಖಲಾಗಿದೆ. ಶುಕ್ರವಾರ ಮಳೆಯ ತೀವ್ರತೆ ಇಳಿಮುಖಗೊಂಡು ಮಡಿಕೇರಿ ರಸ್ತೆಯ ಮೇಲೆ ಹರಿಯುತ್ತಿದ್ದ ಪ್ರವಾಹದ ನೀರು ಇಳಿದು ಸಂಚಾರ ಪುನರಾರಂಭಗೊಂಡಿದೆ. ನಾಪೋಕ್ಲು ರಸ್ತೆಯಲ್ಲಿ ಪ್ರವಾಹದ ನೀರು ಇನ್ನಷ್ಟೆ ಇಳಿಯಬೇಕಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿನ್ನೆ ಬೆಳಗ್ಗಿನಿಂದ ಇಂದು ಬೆಳಗ್ಗಿನವರೆಗೆ ಒಂದು ಇಂಚು ಮಳೆ ದಾಖಲಾಗಿದ್ದರೆ, ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಲ್ಲಿ ಅಲ್ಪಸ್ವಲ್ಪ ಮಳೆಯಷ್ಟೆ ಆಗುತ್ತಿರುವ ಬಗ್ಗೆ ವರದಿಯಾಗಿದೆ. ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ, ಪೊನ್ನಂಪೇಟೆಗಳಲ್ಲಿ ಮಳೆ ಕ್ಷೀಣಿಸಿದ್ದರೆ, ಬಾಳೆಲೆ, ಹುದಿಕೇರಿ, ಶ್ರೀಮಂಗಲ ವಿಭಾಗಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಲಕ್ಷ್ಮಣ ತೀರ್ಥ ನದಿಯ ನೀರಿನ ಮಟ್ಟ ಹೆಚ್ಚುತ್ತಿದ್ದು, ಗದ್ದೆ ಬಯಲುಗಳು ಪ್ರವಾಹದಿಂದ ಆವೃತ್ತವಾಗಿದೆ. ಬರಪ್ಪೊಳೆಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಸಿದ್ದಾಪುರದ ಕರಡಿಗೋಡು ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿವೆ.
ಸೋಮವಾರಪೇಟೆಯ ಪುಷ್ಪಗಿರಿ ತಪ್ಪಲಿನ ಶಾಂತಳ್ಳಿ ವಿಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror