ದಲಾಯಿಲಾಮ ಮಂಗಳೂರಿಗೆ ಆಗಮನ

August 29, 2019
4:46 PM

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಇಂದು ಮಂಗಳೂರಿಗೆ ಆಗಮಿಸಿದರು.

ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು‌.ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ
July 9, 2026
1:18 PM
by: ಸಾಯಿಶೇಖರ್ ಕರಿಕಳ
ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ
July 9, 2026
1:04 PM
by: ದ ರೂರಲ್ ಮಿರರ್.ಕಾಂ
ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ
July 9, 2026
12:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror