ದೀಪ ಹಚ್ಚೋಣ ಇಂದು | ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ…..| ಕೊರೊನಾ ಎಂಬ ಶತ್ರು ಪೀಡೆ ನಾಶವಾಗಲಿ….|

April 5, 2020
8:00 AM

ಸುಳ್ಯ: ಭಾನುವಾರ ರಾತ್ರಿ 9 ಗಂಟೆಗೆ… 9 ನಿಮಿಷಗಳ ಕಾಲ ದೀಪ ಹಚ್ಚೋಣ. ಹಣತೆಯ ದೀಪವಾದರೆ ಉತ್ತಮ. ದೀಪ ಬೆಳಗುವುದು ಎಂದರೆ ಕೇವಲ ದೀಪವಲ್ಲ ಅದರಲ್ಲೊಂದು ಶಕ್ತಿ ಇದೆ. ಆತ್ಮಬಲ ಸಿಗಲಿದೆ. ಹೀಗೆಂದು ಜ್ಯೋತಿಷ್ಯದ ವಿವರಣೆಯೂ ಇದೆ.

ದೀಪ ಹಚ್ಚುವ ಸಮಯದಲ್ಲಿ  ಸಾಧ್ಯವಿದ್ದವರು ಈ ಸಾಲುಗಳನ್ನು  ಹೇಳಿದರೆ ಇನ್ನೂ ಉತ್ತಮ

ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ ಹುವೇಮ

ಪರಮಾತ್ ಸಧಸ್ಥಾತ್ | ಸ ನ: ಪರ್ಷದತಿ ದುರ್ಗಾಣಿ ವಿಶ್ವಾ

ಕ್ಷಾಮದ್ದೇವೋ ಅತಿ ದುರಿತಾತ್ಯಗ್ನಿ: |

ಅಂದರೆ ,ಈ ವಾಕ್ಯವು ಅಗ್ನಿದೇವನ ಸ್ತುತಿ.

ಶತ್ರುಸೇನೆಯನ್ನು ಪೃತನಾ ಎನ್ನುವರು. ಇದನ್ನು ಜಯಿಸುವವನು ಪೃತನಾಜಿತನು. ಸಹಾಮಾನವೆಂದರೆ  ಶತ್ರುಗಳನ್ನು ಹಿಮ್ಮೆಟ್ಟಿಸುವವನು ಎಂದರ್ಥ.  ಈ  ಎರಡೂ ಗುಣಗಳುಳ್ಳ  ಉಗ್ರನೂ ಆದ ಅಗ್ನಿಯು ಉತ್ಕೃಷ್ಟವಾದ ದೇಶದಲ್ಲಿ  ತನ್ನ ಸೇವಕರೊಡಗೂಡಿನ ಇದ್ದುಕೊಂಡಿರುವನಷ್ಟೇ, ಅವನನ್ನು ಆಹ್ವಾನಿಸುವೆವು. ಅವನು ನಮ್ಮ ಅತಿ ಕಷ್ಟಕರವಾದ ಸನ್ನಿವೇಶಗಳನ್ನೆಲ್ಲ ನಾಶಗೊಳಿಸುವವನಾಗಲಿ  ಮತ್ತು ಅಗ್ನಿ ದೇವನು ಅಪರಾಧಿಗಳಾದ ನಮ್ಮನ್ನು ಕ್ಷಮಿಸುವವನಾಗಿ ದುರಿತಗಳನ್ನೆಲ್ಲ ದೂರ ಮಾಡಿ ಶುದ್ದರಾಗುವಂತೆ ಮಾಡಲಿ ಎಂದರ್ಥ.

ಪ್ರಧಾನಿ ನರೇಂದ್ರ ಮೋದಿ ಅವರು  ಹಣತೆ ಹಚ್ಚಲು  ಹೇಳಿದ್ದಾರೆ, ಇದು ಭಾರತದಂತಹ  ಆಧ್ಯಾತ್ಮ ಮೂಲದ ದೇಶದಲ್ಲಿ ಹೆಚ್ಚು ಪ್ರಭಾವ ಬೀರುವ ಸಂಗತಿಯಾಗಿದೆ. ಪ್ರತಿಯೊಬ್ಬರೂ ಇದರ ಆಚರಣೆ ಮಾಡಿದರೆ ದೈವೀಕ ಶಕ್ತಿ, ಆಯುರ್ವೇದ ಶಕ್ತಿ ಹೊಂದಿರುವ  ಈ ದೇಶದಲ್ಲಿ  ಹೆಚ್ಚು ಪರಿಣಾಮ ಬೀರಬಲ್ಲುದು  ಎಂದು  ಸುಳ್ಯದ ವಳಲಂಬೆಯ ವೇದ ವಿದ್ವಾಂಸರಾದ ಕರುವಜೆ ಕೇಶವ ಜೋಯಿಸರು ಹೇಳುತ್ತಾರೆ. ಪೃತನಾಜಿತಗ್ಂ….. ಸಾಲುಗಳು ಕೂಡಾ ದೇಶಕ್ಕೆ ಬಲ ತುಂಬಲಿದೆ ಎನ್ನುತ್ತಾರೆ ಕರುವಜೆ ಕೇಶವ ಜೋಯಿಸರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror