ದೇವರಕಾನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ

Advertisement

ನಿಂತಿಕಲ್ಲು :  ಮುರುಳ್ಯ ಗ್ರಾಮದ ದೇವರಕಾನ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ, ಜಾತ್ರೋತ್ಸವವು ಬ್ರಹ್ಮಶ್ರೀ ವೇ.ಮೂ. ನೀಲೇಶ್ವರ  ದಾಮೋದರ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು.

Advertisement

ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಪ್ರಾರ್ಥನೆ, ಪುಣ್ಯಾಹಶುದ್ಧಿ, ಪ್ರಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.  ಬಳಿಕ ದೇವರ ಬಲಿ ಹೊರಟು ದರ್ಶನ ಬಲಿ ನಡೆಯಿತು. ಬೆಳ್ಳಾರೆಯ ಯಕ್ಷರಂಗದವರಿಂದ ವೀರಮಣಿಕಾಳಗ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

Advertisement

ದೇವಳದ ಪ್ರಧಾನ ಅರ್ಚಕ ವೇ.ಮೂ. ಕೆ ಸೂರ್ಯನಾರಾಯಣ ಭಟ್, ಪೂದೆ ಸುಬ್ರಹ್ಮಣ್ಯ ಉಪಾಧ್ಯಾಯ, ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪಿ.ಆರ್ ಭಟ್, ಕಾರ್ಯದರ್ಶಿ ಅನೂಪ್ ಬಿಳಿಮಲೆ, ಉಪಾಧ್ಯಕ್ಷ ಭಾಸ್ಕರ ಮುರುಳ್ಯ, ಕೇಶವ ಭಟ್ ಮಾನಸವನ, ಕೋಶಾಧಿಕಾರಿ ಜನಾರ್ಧನ ಅಲೆಕ್ಕಾಡಿ, ಸದಸ್ಯರು, ಉತ್ಸವ ಸಮಿತಿ ಅಧ್ಯಕ್ಷ ದಿವಾಕರ ರೈ ಪೊಗ್ಗೊಲಿ, ಪದಾಧಿಕಾರಿಗಳು, ಉಪಸಮಿತಿ ಪದಾಧಿಕಾರಿಗಳು, ನೂರಾರು ಭಕ್ತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ದೇವರಕಾನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ"

Leave a comment

Your email address will not be published.


*