ದ ಕ ಜಿಲ್ಲೆಗೆ ಭಾನುವಾರ ನೆಮ್ಮದಿ | ಕೊರೊನಾ ನೆಗೆಟಿವ್ ವರದಿ | ರಾಜ್ಯದಲ್ಲಿ 13 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ | ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆ |

May 3, 2020
10:01 PM

ಮಂಗಳೂರು: ದ ಕ ಜಿಲ್ಲೆಯಲ್ಲಿ  ಭಾನುವಾರ ಲಭ್ಯವಾದ ಎಲ್ಲಾ ಕೊರೊನಾ ವೈರಸ್ ವರದಿಗಳು ನೆಗೆಟಿವ್ ಆಗಿದೆ. ಒಟ್ಟು 114 ಮಂದಿಯ ಪರೀಕ್ಷಾ ವರದಿ ಕೈ ಸೇರಿದ್ದು, ಎಲ್ಲವೂ ನೆಗೆಟಿವ್ ಆಗಿದೆ. ಜಿಲ್ಲೆಯ 113 ಮಂದಿ ಪತ್ರಕರ್ತರ ಪರೀಕ್ಷಾ ವರದಿಯೂ ನೆಗೆಟಿವ್ ಆಗಿದೆ. ಹೀಗಾಗಿ ಭಾನುವಾರ ದ ಕ ಜಿಲ್ಲೆಗೆ  ನೆಮ್ಮದಿಯ ದಿನವಾಗಿದೆ. ಈ ನಡುವೆ ಸೋಮವಾರದಿಂದ  ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟಗಳಿಗೆ ವಿನಾಯಿತಿ ನೀಡಲಾಗಿದೆ.

ಭಾನುವಾರ 95 ಮಂದಿಯ ಸ್ಯಾಂಪಲ್ ಪರೀಕ್ಷೆಗೆ ರವಾನಿಸಲಾಗಿದ್ದು 16 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. ಒಟ್ಟು 2243 ಮಂದಿ ಫಿವರ್ ಕ್ಲೀನಿಕ್ ನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದಾರೆ. 

ದ ಕ ಜಿಲ್ಲೆಯಲ್ಲಿ ಸೋಮವಾರದಿಂದ ಜನರ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಸಾಮಾಜಿಕ ಅಂತರದೊಂದಿಗೆ ನಿಯಮಗಳೊಂದಿಗೆ ಓಡಾಟ ಮಾಡಬಹುದು.

ರಾಜ್ಯದಲ್ಲಿ ಭಾನುವಾರ 13 ಹೊಸ ಕೊರೊನಾ ಪಾಸಿಟಿವ್  ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆಯಾಗಿದೆ. 25 ಮಂದಿ ಮೃತಪಟ್ಟಿದ್ದು  293 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.ಕಲಬುರಗಿಯಲ್ಲಿ ಆರು, ಬೆಂಗಳೂರು ನಗರ ಜಿಲ್ಲೆಯಲ್ಲಿ 4 ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಮೂರು ಪ್ರಕರಣಗಳು ಇಂದು ಪತ್ತೆಯಾಗಿವೆ.

ಕಾಸರಗೋಡಿನಲ್ಲಿ ಸತತ 3 ನೇ ದಿನವೂ ಕೊರೊನಾ ಪಾಸಿಟಿವ್ ಹೊಸ ಪ್ರಕರಣ ದೃಢಪಟ್ಟಿಲ್ಲ. ಕೇರಳದಲ್ಲಿ ಭಾನುವಾರ ಪ್ರಕರಣ ದಾಖಲಾಗಿಲ್ಲ.ಕಾಸರಗೋಡು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 5 ವರೆಗೆ ವಿನಾಯಿತಿ ನೀಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror