ದ ಕ ಜಿಲ್ಲೆಯಲ್ಲಿ ಇನ್ನೊಂದು ಸೀಲ್ಡೌನ್ ಪ್ರದೇಶ | ಉಡುಪಿ- ಕಾಸರಗೋಡಿನಲ್ಲಿ ಗುರುವಾರ ನೆಮ್ಮದಿ |

April 23, 2020
10:18 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಗುರುವಾರ  ಒಬ್ಬರು ಮಹಿಳೆಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಅವರು ಸಂಜೆಯ ವೇಳೆಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾದ ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಬಂಟ್ವಾಳ ಪಟ್ಟಣ ಹಾಗೂ ಮಂಗಳೂರಿನ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಸುತ್ತಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ಸೀಲ್ಡೌನ್ ಮಾಡಲಾಗಿದೆ. ಅಲ್ಲದೆ ಆಸ್ಪತ್ರೆಯ 5 ಕಿ.ಮೀ. ವ್ಯಾಪ್ತಿಯನ್ನು ಬಫರ್ ಝೋನ್  ಘೋಷಣೆ ಮಾಡಲಾಗಿದೆ.

ಗುರುವಾರ ಉಸಿರಾಟದ ಸಮಸ್ಯೆಯಿಂದ 14 ಮಂದಿಯ ಪ್ರಕರಣ ದಾಖಲಾಗಿದ್ದು ಇವುಗಳಲ್ಲಿ 8  ಪ್ರಕರಣಗಳನ್ನು  ವೆನ್ಲಾಕ್ ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ. ಒಟ್ಟು 39 ಮಂದಿಯನ್ನು  ನಿಗಾದಲ್ಲಿ ಇರಿಸಲಾಗಿದೆ. 376 ಮಂದಿಯ ರಕ್ತ ಪರೀಕ್ಷೆಯ ವರದಿ ಬರಲು ಬಾಕಿ ಇದೆ. 214 ಮಂದಿಯ ತಪಾಸಣಾ ವರದಿ ಬಂದಿತ್ತು, ಅದರಲ್ಲಿ  1 ಪಾಸಿಟಿವ್ ಕಂಡುಬಂದಿತ್ತು. ಉಳಿದ 213 ಮಂದಿಯದ್ದು ನೆಗೆಟಿವ್ ವರದಿ ಕಂಡುಬಂದಿತ್ತು. ಇಂದು ಕೂಡಾ 95 ಮಂದಿ ಗಂಟಲ ದ್ರವ ತಪಾಸಣೆಗೆ ಕಳುಹಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ  ಯಾವುದೇ ಪ್ರಕರಣ ದಾಖಲಾಗಿಲ್ಲ.

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಯಾವುದೇ ಹೊಸ ಪ್ರಕರಣ ಕಂಡುಬಂದಿಲ್ಲ. ಇನ್ನು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror