ದ ಕ ಜಿಲ್ಲೆಯಲ್ಲಿ ಶುಕ್ರವಾರ ನೆಮ್ಮದಿ | ಉಡುಪಿ ಜಿಲ್ಲೆ ಕೊರೊನಾ ಮುಕ್ತ | ಕಾಸರಗೋಡಿನಲ್ಲಿ 3 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಒಂದೇ ದಿನ 29 ಪ್ರಕರಣ ಪತ್ತೆ |

April 24, 2020
7:59 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಶುಕ್ರವಾರ ಕೊರೊನಾ ವೈರಸ್ ನೆಗೆಟಿವ್ ವರದಿ ಬಂದಿದೆ. ಉಡುಪಿ ಜಿಲ್ಲೆಯು ಇಂದು ಕೊರೊನಾ ವೈರಸ್ ಮುಕ್ತ ಜಿಲ್ಲೆಯಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ  ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಕರ್ನಾಟಕದಲ್ಲಿ ಒಂದೇ ದಿನ 29 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆಯವರೆಗೆ ಯಾವುದೇ ಕೊರೊನಾ ಪಾಸಿಟಿವ್ ವರದಿಗಳು ಪತ್ತೆಯಾಗಿಲ್ಲ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ಮಹಿಳೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ಈ ಮೂಲಕ ಕೊರೊನಾ ಮುಕ್ತ ಜಿಲ್ಲೆಯಾಗಿದೆ.ಕೊರೊನಾ ಸೋಂಕಿತೆ ಗರ್ಭಿಣಿಯ ಪತಿಯು ಗಲ್ಫ್ ದೇಶದಿಂದ ಮರಳಿದ್ದು ಪತ್ನಿಗೆ ಸೋಂಕು ತಗುಲಿತ್ತು. ಸೋಂಕಿತೆ ಗರ್ಭಿಣಿಯಾದ ಕಾರಣದಿಂದಾಗಿ ಈ ಪ್ರಕರಣದ ಮೇಲೆ ಹೆಚ್ಚಿನ ನಿಗಾ ವಹಿಸಿ ಉಡುಪಿ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  ಶುಕ್ರವಾರ ಒಂದೇ ದಿನ ಬರೋಬ್ಬರಿ 29 ಮಂದಿಯಲ್ಲಿ  ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿಯೇ 19 ಮಂದಿಗೆ ಕೊರೊನಾ ಸೋಂಕು  ದೃಢಪಟ್ಟಿದೆ. ಸಂಜೆಯ ವೇಳೆಗೆ ರಾಜ್ಯದ ಎಲ್ಲಾ ಪ್ರಕರಣಗಳು ಸೇರಿ ಒಟ್ಟು 29 ಮಂದಿಯಲ್ಲಿ  ಕೊರೊನಾ ಪಾಸಿಟಿವ್ ಕಂಡುಬಂದಿದೆ.  ಇದುವರೆಗೆ 18 ಜನರು ಮೃತಪಟ್ಟಿದ್ದು, 145 ಮಂದಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ  ತಿಳಿಸಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ  ಶುಕ್ರವಾರ 3 ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣ ಕಂಡುಬಂದಿದೆ.ಇಡೀ ಕೇರಳದಲ್ಲಿ ಒಟ್ಟು 3 ಪ್ರಕರಣ ಮಾತ್ರಾ ಕಂಡುಬಂದಿದೆ. ಈ ಮೂಲಕ ಕೇರಳದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 450 ಕ್ಕೆ ಏರಿಕೆಯಾಗಿದೆ. ಒಟ್ಟು 116 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಮರನಾಥ ಯಾತ್ರೆ ಹಿನ್ನೆಲೆ | ಜುಲೈ 1 ರಿಂದ ಆಗಸ್ಟ್  ತಿಂಗಳವರೆಗೆ ಅಮರನಾಥ ಹಾರಾಟ ನಿಷೇಧ ವಲಯ
June 18, 2025
3:37 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |
June 18, 2025
12:35 PM
by: ಸಾಯಿಶೇಖರ್ ಕರಿಕಳ
ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!
June 18, 2025
6:50 AM
by: ದ ರೂರಲ್ ಮಿರರ್.ಕಾಂ
ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ
June 17, 2025
10:15 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group