ನಗರಪಂಚಾಯತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ- 7 ಕಡೆ ಬಗೆಹರಿಯದ ಬಿಕ್ಕಟ್ಟು

Advertisement

ಸುಳ್ಯ: ಮ್ಯಾರಥಾನ್ ಚರ್ಚೆಗಳ ಬಳಿಕವೂ ನಗರ ಪಂಚಾಯತ್ ನ 7 ವಾರ್ಡ್ ಗಳ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಬಿಕ್ಕಟ್ಟು ಬಗೆ ಹರಿದಿಲ್ಲ.

Advertisement

ಮಾಜಿ ಸಚಿವ ಬಿ.ರಮಾನಾಥ ರೈ, ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮತ್ತು ಸ್ಪರ್ಧಾ ಆಕಾಂಕ್ಷಿಗಳ ಮಧ್ಯೆ ಭಾನುವಾರ ರಾತ್ರಿಯೂ ಚರ್ಚೆ ನಡೆದರೂ ಪಟ್ಟಿ ಅಂತಿಮಗೊಂಡಿಲ್ಲ.

Advertisement
Advertisement

ನಗರ ಪಂಚಾಯತ್ ಚುನಾವಣೆಗೆ 13 ವಾರ್ಡ್ ಗಳ ಅಭ್ಯರ್ಥಿಗಳ ಘೋಷಣೆ ಈಗಾಗಲೇ ಮಾಡಲಾಗಿದೆ. 20 ವಾರ್ಡ್ ಗಳ ಪೈಕಿ ಏಳು ವಾರ್ಡ್ ಗಳ ಆಯ್ಕೆ ಕಗ್ಗಂಟಾಗಿದೆ. ವಾರ್ಡ್ ಸಂಖ್ಯೆ 3(ಜಯನಗರ),4(ಶಾಂತಿನಗರ), 6(ಬೀರಮಂಗಲ),12(ಕೆರೆಮೂಲೆ), 13(ಬೂಡು), 15(ಗಾಂಧಿನಗರ-ನಾವೂರು), 17(ಬೋರುಗುಡ್ಡೆ) ವಾರ್ಡ್ ಗಳಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿದಿದೆ. ಇಲ್ಲಿ ಆಕಾಂಕ್ಷಿಗಳ ಪಟ್ಟಿ ಉದ್ದ ಇರುವ ಕಾರಣ ಅಭ್ಯರ್ಥಿ ಆಯ್ಕೆ ನೇತೃತ್ವಕ್ಕೆ ಕಗ್ಗಂಟಾಗಿದೆ.

ಬೋರುಗುಡ್ಡೆ, ನಾವೂರು ಎರಡು ವಾರ್ಡ್ ಗಳಿಗೆ ಮೂರು ಹೆಸರು ಅಂತಿಮಗೊಳಿಸಲಾಗಿದೆ. ಕೆ.ಎಂ.ಮುಸ್ತಫಾ, ಆರ್.ಕೆ.ಮಹಮ್ಮದ್, ಶರೀಫ್ ಕಂಠಿ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ತಿಳಿದು ಬಂದಿದೆ.
ಕೆರೆಮೂಲೆ ವಾರ್ಡ್ ನಲ್ಲಿ ಎಂ.ವೆಂಕಪ್ಪ ಗೌಡ, ದಿನೇಶ್ ಅಂಬೆಕಲ್ಲು ಹೆಸರು ಅಂತಿಮ ಪಟ್ಟಿಯಲ್ಲಿದೆ. ಬೂಡು ವಾರ್ಡ್ ನಲ್ಲಿ ಕೆ.ಗೋಕುಲ್ ದಾಸ್, ರಿಯಾಝ್ ಕಟ್ಟೆಕ್ಕಾರ್, ಲಕ್ಷ್ಮಣ ಶೆಣೈ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಉಳಿದ ಮೂರು ವಾರ್ಡ್ ಗಳಲ್ಲಿಯೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಚರ್ಚೆ ನಡೆದರೂ ಅಂತಿಮ ಘೋಷಣೆ ಕಾಯ್ದಿರಿಸಲಾಗಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ನಗರಪಂಚಾಯತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ- 7 ಕಡೆ ಬಗೆಹರಿಯದ ಬಿಕ್ಕಟ್ಟು"

Leave a comment

Your email address will not be published.


*